ಶಾಸಕ ಪ್ರತಾಪ್ ಸರ್ನಾಯ್ಕ್ 
ದೇಶ

ವಿಳಂಬವಾಗುವುದಕ್ಕೂ ಮುನ್ನ ಬಿಜೆಪಿ ಜೊತೆ ಮರು ಮೈತ್ರಿ ಉತ್ತಮ: ಉದ್ಧವ್ ಠಾಕ್ರೆಗೆ ಶಿವಸೇನೆ ಶಾಸಕ

ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರೊಬ್ಬರು ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ಬಿಜೆಪಿ ಜೊತೆ ಮರು ಮೈತ್ರಿಯೇ ಉತ್ತಮ ಎಂದು ಸಲಹೆ ನೀಡಿದ್ದಾರೆ. 

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರೊಬ್ಬರು ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ಬಿಜೆಪಿ ಜೊತೆ ಮರು ಮೈತ್ರಿಯೇ ಉತ್ತಮ ಎಂದು ಸಲಹೆ ನೀಡಿದ್ದಾರೆ. 

ಜಾರಿ ನಿರ್ದೇಶನಾಲಯದ ತೂಗುಗತ್ತಿಯಲ್ಲಿರುವ ಶಾಸಕ ಪ್ರತಾಪ್ ಸರ್ನಾಯ್ಕ್ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ವಿಳಂಬವಾಗುವುದಕ್ಕೂ ಮುನ್ನ ಬಿಜೆಪಿ ಜೊತೆ ಮರು ಮೈತ್ರಿ ಮಾಡಿಕೊಳ್ಳುವುದು ಅತ್ಯುತ್ತಮ ಎಂದು ಹೇಳಿದ್ದಾರೆ. 

ಜೂ.10 ರಂದು ಪತ್ರ ಬರೆದಿದ್ದು, ಬಿಜೆಪಿ-ಶಿವಸೇನೆ ನಡುವಿನ ಮೈತ್ರಿ ಮುರಿದುಬಿದ್ದಿದ್ದರೂ ಉಭಯ ಪಕ್ಷಗಳ ನಾಯಕರ ನಡುವಿನ ವೈಯಕ್ತಿಕ ಸಾಮರಸ್ಯ ಎಂದಿನಂತೆಯೇ ಇದೆ. 

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯ ಸರ್ನಾಯ್ಕ್ ಗೆ ಸಂಬಂಧಿಸಿದ ಜಾಗಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆಸಿತ್ತು. ಶಿವಸೇನೆ ಈ ದಾಳಿಯನ್ನು ರಾಜಕೀಯ ಹಗೆತನ ಎಂದು ಆರೋಪಿಸಿದ್ದಾರೆ. 

ನಾನು ಅರ್ಜುನನಂತೆ ಯುದ್ಧ ಮಾಡಿತ್ತಿದ್ದೇನೆ, ನನ್ನ ಸರ್ಕಾರ ಅಥವಾ ನಮ್ಮ ನಾಯಕರ ಬೆಂಬಲ ತೆಗೆದುಕೊಳ್ಳದೇ ಕಳೆದ 7 ತಿಂಗಳಲ್ಲಿ ಏಕಾಂಗಿಯಾಗಿ ಕಾನೂನು ಹೋರಾಟ ನಡೆಸುತ್ತಿದ್ದೇನೆ ಎಂದು ಸರ್ನಾಯ್ಕ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT