ಶಾಸಕ ಪ್ರತಾಪ್ ಸರ್ನಾಯ್ಕ್ 
ದೇಶ

ವಿಳಂಬವಾಗುವುದಕ್ಕೂ ಮುನ್ನ ಬಿಜೆಪಿ ಜೊತೆ ಮರು ಮೈತ್ರಿ ಉತ್ತಮ: ಉದ್ಧವ್ ಠಾಕ್ರೆಗೆ ಶಿವಸೇನೆ ಶಾಸಕ

ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರೊಬ್ಬರು ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ಬಿಜೆಪಿ ಜೊತೆ ಮರು ಮೈತ್ರಿಯೇ ಉತ್ತಮ ಎಂದು ಸಲಹೆ ನೀಡಿದ್ದಾರೆ. 

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರೊಬ್ಬರು ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ಬಿಜೆಪಿ ಜೊತೆ ಮರು ಮೈತ್ರಿಯೇ ಉತ್ತಮ ಎಂದು ಸಲಹೆ ನೀಡಿದ್ದಾರೆ. 

ಜಾರಿ ನಿರ್ದೇಶನಾಲಯದ ತೂಗುಗತ್ತಿಯಲ್ಲಿರುವ ಶಾಸಕ ಪ್ರತಾಪ್ ಸರ್ನಾಯ್ಕ್ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು, ವಿಳಂಬವಾಗುವುದಕ್ಕೂ ಮುನ್ನ ಬಿಜೆಪಿ ಜೊತೆ ಮರು ಮೈತ್ರಿ ಮಾಡಿಕೊಳ್ಳುವುದು ಅತ್ಯುತ್ತಮ ಎಂದು ಹೇಳಿದ್ದಾರೆ. 

ಜೂ.10 ರಂದು ಪತ್ರ ಬರೆದಿದ್ದು, ಬಿಜೆಪಿ-ಶಿವಸೇನೆ ನಡುವಿನ ಮೈತ್ರಿ ಮುರಿದುಬಿದ್ದಿದ್ದರೂ ಉಭಯ ಪಕ್ಷಗಳ ನಾಯಕರ ನಡುವಿನ ವೈಯಕ್ತಿಕ ಸಾಮರಸ್ಯ ಎಂದಿನಂತೆಯೇ ಇದೆ. 

ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯ ಸರ್ನಾಯ್ಕ್ ಗೆ ಸಂಬಂಧಿಸಿದ ಜಾಗಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆಸಿತ್ತು. ಶಿವಸೇನೆ ಈ ದಾಳಿಯನ್ನು ರಾಜಕೀಯ ಹಗೆತನ ಎಂದು ಆರೋಪಿಸಿದ್ದಾರೆ. 

ನಾನು ಅರ್ಜುನನಂತೆ ಯುದ್ಧ ಮಾಡಿತ್ತಿದ್ದೇನೆ, ನನ್ನ ಸರ್ಕಾರ ಅಥವಾ ನಮ್ಮ ನಾಯಕರ ಬೆಂಬಲ ತೆಗೆದುಕೊಳ್ಳದೇ ಕಳೆದ 7 ತಿಂಗಳಲ್ಲಿ ಏಕಾಂಗಿಯಾಗಿ ಕಾನೂನು ಹೋರಾಟ ನಡೆಸುತ್ತಿದ್ದೇನೆ ಎಂದು ಸರ್ನಾಯ್ಕ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT