ಥಳಿತ (ಸಾಂಕೇತಿಕ ಚಿತ್ರ) 
ದೇಶ

ತ್ರಿಪುರಾ: ಗೋ ಕಳ್ಳಸಾಗಣೆ ಶಂಕೆ, ಮೂವರಿಗೆ ಥಳಿತ! 

 ಗೋವುಗಳ ಕಳ್ಳಸಾಗಣೆ ಶಂಕೆಯಿಂದ ಮೂವರಿಗೆ ತೀವ್ರವಾಗಿ ಥಳಿಸಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. 

ಅಗರ್ತಲಾ: ಗೋವುಗಳ ಕಳ್ಳಸಾಗಣೆ ಶಂಕೆಯಿಂದ ಮೂವರಿಗೆ ತೀವ್ರವಾಗಿ ಥಳಿಸಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. 

ಖೋವಾಯ್ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು,  ನಮನ್ಜ್ಯೋಯ್ಪಾರಾದ ಗ್ರಾಮಸ್ಥರು ಅಗರ್ತಲಾ ಮಾರ್ಗದಲ್ಲಿ ಐದು ಹಸುಗಳನ್ನು ಹೊತ್ತು ಸಂಚರಿಸುತ್ತಿದ್ದ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇದರಲ್ಲಿದ್ದ ಮೂರು ಮಂದಿಯನ್ನು ಮಾರಕಾಸ್ತ್ರಗಳಿಂದ ಹೊಡೆದಿದ್ದು, ಓರ್ವ ಪರಾರಿಯಾಗಲು ಯತ್ನಿಸಿದ್ದಾನೆ ಆದರೆ ಉತ್ತರ ಮಹರಣಿಪುರದಲ್ಲಿ ಆತನನ್ನು ಹಿಡಿದು ಥಳಿಸಲಾಗಿದೆ. 

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಥಳಿತಕ್ಕೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲೇ ಅವರು ಸಾವನ್ನಪ್ಪಿದ್ದರು ಎಂದು ವೈದ್ಯರು ಘೋಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಮೃತಪಟ್ಟವರು ಜಯೀದ್ ಹೊಸ್ಸೇನ್ (30) ಬಿಲಾಲ್ ಮಿಯಾ (28) ಸೈಫುಲ್ ಇಸ್ಲಾಮ್ (18) ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT