ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಪಂಜಾಬ್ ಚುನಾವಣೆ-2022: ಸಿಖ್ ಸಮುದಾಯದವರೇ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ; ಕೇಜ್ರಿವಾಲ್ ಘೋಷಣೆ

ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಸಿಖ್ ಸಮುದಾಯದವರೇ ಆಗಿರಲಿದ್ದಾರೆ ಎಂದು ಘೋಷಿಸಿದ್ದಾರೆ.

ಅಮೃತ್ ಸರ್: ಪಂಜಾಬ್ ವಿಧಾನಸಭೆ ಚುನಾವಣೆ 2022 ರಲ್ಲಿ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ಚುನಾವಣೆ ಎದುರಿಸಲು ಸಜ್ಜುಗೊಂಡಿದೆ. ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಸಿಖ್ ಸಮುದಾಯದವರೇ ಆಗಿರಲಿದ್ದಾರೆ ಎಂದು ಘೋಷಿಸಿದ್ದಾರೆ.

ಸಿಎಂ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಜ್ರಿವಾಲ್, ಪಕ್ಷದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ, ನಿರ್ಧಾರವಾದಾಗ ನಿಮಗೆ ಮಾಹಿತಿ ನೀಡುತ್ತೇವೆ ಎಂದು ಪತ್ರಕರ್ತರಿಗೆ ಕೇಜ್ರಿವಾಲ್ ತಿಳಿಸಿದ್ದಾರೆ.

"ಇಡೀ ಪಂಜಾಬ್ ನಮ್ಮ ಸಿಎಂ ಅಭ್ಯರ್ಥಿ ಬಗ್ಗೆ ಹೆಮ್ಮೆ ಪಡಲಿದೆ, ಅವರು ಸಿಖ್ ಸಮುದಾಯದವರೇ ಆಗಿರುತ್ತಾರೆ" ಎಂದು ಕೇಜ್ರಿವಾಲ್ ಮಾರ್ಮಿಕವಾಗಿ ನುಡಿದಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ರಾಜ್ಯದಲ್ಲಿ ಈಗಿರುವ ಆಡಳಿತದಿಂದ ಜನತೆ ಬೇಸತ್ತಿದ್ದು ಹೊಸ ರೀತಿಯ ನಾಯಕತ್ವವನ್ನು ಬಯಸುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. 

2015 ರಲ್ಲಿ ಪಂಜಾಬ್ ನ ಕೊಟ್ಕಾಪುರ ಪೊಲೀಸ್ ಫೈರಿಂಗ್ ಪ್ರಕರಣದ ತನಿಖೆ ನಡೆಸಲು ರಚಿಸಿದ್ದ ಎಸ್ಐಟಿಯಲ್ಲಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವಾರ್ ವಿಜಯ್ ಪ್ರತಾಪ್ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಜ್ರಿವಾಲ್ ಮಾತನಾಡುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT