ಗಂಗಾ ಪ್ರಸಾದ್ ಶರ್ಮಾ 
ದೇಶ

ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಗಂಗಾ ಪ್ರಸಾದ್ ಶರ್ಮಾ, ಮತ್ತಿತರರು ಟಿಎಂಸಿಗೆ ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ದೊಡ್ಡ ಹೊಡೆತ ಬಿದಿದ್ದೆ. ಅಲಿಪುರ್ದಾರ್ ಜಿಲ್ಲಾ ಅಧ್ಯಕ್ಷ ಗಂಗಾ ಪ್ರಸಾದ್ ಶರ್ಮಾ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೊಲ್ಕತ್ತಾ:  ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ದೊಡ್ಡ ಹೊಡೆತ ಬಿದಿದ್ದೆ. ಅಲಿಪುರ್ದಾರ್ ಜಿಲ್ಲಾ ಅಧ್ಯಕ್ಷ ಗಂಗಾ ಪ್ರಸಾದ್ ಶರ್ಮಾ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಇತ್ತೀಚಿಗೆ ಹಿರಿಯ ಮುಖಂಡ ಮುಕುಲ್ ರಾಯ್ ಟಿಎಂಸಿಗೆ ವಾಪಸ್ಸಾಗಿದ್ದರು. ಇದು ಪಶ್ಚಿಮ ಬಂಗಾಳದಲ್ಲಿ ಕೇಸರಿ ಪಕ್ಷದ ಆರಂಭ ಎಂದು ಹೇಳಿದ್ದರು. ಈ ವಲಯದಿಂದ ಏಳು ಮಂದಿ ಬಿಜೆಪಿ ಮುಖಂಡರು ಶರ್ಮಾ ಅವರ ಹೆಜ್ಜೆಯನ್ನು ಅನುಸರಿಸಿದ್ದು, ಮಮತಾ ಗುಂಪಿಗೆ ಸೇರ್ಪಡೆಯಾದರು.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ತಳಮಟ್ಟದ ಕಾರ್ಯಕರ್ತರ ಭಾವನೆಗಳನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ಶರ್ಮಾ ಆರೋಪಿಸಿದರು. ನಮ್ಮನ್ನು ನಿರ್ಲಕ್ಷಿಸಲಾಗಿದೆ ಅನ್ನಿಸುತ್ತಿದೆ ಆದರೂ, ಅಲಿಪುರ್ದಾರ್ ಜಿಲ್ಲೆಯಲ್ಲಿ ಐದು ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಸಾಧ್ಯವಾದಷ್ಟು ಬಿಜೆಪಿಗೆ ಕೊಡುಗೆ ನೀಡಿದ್ದೇವೆ. ಆದರೆ, ಈಗ, ಮಮತಾ ಬ್ಯಾನರ್ಜಿ ನ್ಯಾಯಕತ್ವದಡಿ ಜನರಿಗಾಗಿ ಕೆಲಸ ಮಾಡುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲಿಲ್ಲ ಎಂದು ಬಿಜೆಪಿಯನ್ನು ತೊರೆದಿದ್ದಾರೆ ಎಂಬ ಸುವೇಂದು ಅಧಿಕಾರಿ ಹೇಳಿಕೆಯನ್ನು ತಳ್ಳಿ ಹಾಕಿದ ಶರ್ಮಾ, ಚುನಾವಣೆ ಸಂದರ್ಭಧಲ್ಲಿ ಸುವೇಂದು ಅಧಿಕಾರಿ ಏಕೆ ಬಿಜೆಪಿಗೆ ಸೇರ್ಪಡೆಯಾದರು. ಹಿರಿಯ ಮುಖಂಡ ಮನೋಜ್ ತಿಗ್ಗಾ ಇದ್ದರೂ ಏಕೆ ಸುವೇಂದು ಅಧಿಕಾರಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕನ್ನಾಗಿ ನೇಮಿಸಲಾಯಿತು ಎಂಬುದನ್ನು ತಿಳಿಯಲು ಬಯಸುವುದಾಗಿ ಶರ್ಮಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT