ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಕೇರಳದಲ್ಲಿ ಡೆಲ್ಟಾ-ಪ್ಲಸ್ ರೂಪಾಂತರದ ಮೊದಲ ಪ್ರಕರಣ ಪತ್ತೆ

ವಿಶ್ವ ಆರೋಗ್ಯ ಸಂಸ್ಥೆ ‘ಕರಿಯಂಟ್ ಆಫ್ ಕನ್ಸರ್ನ್’ ಎಂದು ವರ್ಗೀಕರಿಸಿರುವ ಕೋವಿಡ್ -19 ರ 'ಡೆಲ್ಟಾ-ಪ್ಲಸ್' ರೂಪಾಂತರದ ಮೊದಲ ಪ್ರಕರಣ ಕೇರಳದಲ್ಲಿ ಸೋಮವಾರ ವರದಿಯಾಗಿದೆ.

ಪಥನಂತಿಟ್ಟ: ವಿಶ್ವ ಆರೋಗ್ಯ ಸಂಸ್ಥೆ ‘ಕರಿಯಂಟ್ ಆಫ್ ಕನ್ಸರ್ನ್’ ಎಂದು ವರ್ಗೀಕರಿಸಿರುವ ಕೋವಿಡ್ -19 ರ 'ಡೆಲ್ಟಾ-ಪ್ಲಸ್' ರೂಪಾಂತರದ ಮೊದಲ ಪ್ರಕರಣ ಕೇರಳದಲ್ಲಿ ಸೋಮವಾರ ವರದಿಯಾಗಿದೆ.

ಪಥನಂತಿಟ್ಟ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದ್ದರೆ, ಪಾಲಕ್ಕಾಡ್ ಜಿಲ್ಲೆಯಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ

ಕಾಡಾಪ್ರ ಪಂಚಾಯತ್‌ನ ವಾರ್ಡ್ ಸಂಖ್ಯೆ 14 ರಲ್ಲಿ ನಾಲ್ಕು ವರ್ಷದ ಬಾಲಕನಲ್ಲಿ ಹೆಚ್ಚು ತೀಕ್ಷ್ಣವಾದ 'ಡೆಲ್ಟಾ-ಪ್ಲಸ್' ರೂಪಾಂತರದ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಪಥನಂತಿಟ್ಟ ಕಲೆಕ್ಟರ್ ನರಸಿಂಹಗಿರಿ ಟಿ.ಎಲ್.ರೆಡ್ಡಿ ಹೇಳಿದ್ದಾರೆ. ಮೇ 24 ರಂದು ಬಾಲಕನಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು.

ನವದೆಹಲಿ ಮೂಲದ ಸಿಎಸ್ಐಆರ್ ಇನ್ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಮತ್ತು ಇಂಟಿಗ್ರೇಟಿವ್ ಬಯಾಲಜಿಯಲ್ಲಿಅವನ  ಮಾದರಿಗಳ ಮೇಲಿನ ಪರೀಕ್ಷೆಯಲ್ಲಿ ಡೆಲ್ಟಾ-ಪ್ಲಸ್ ರೂಪಾಂತರ ಪತ್ತೆಯಾಗಿದೆ.

ಅಪಾಯಕಾರಿ ಕೋವಿಡ್ -19 ರೂಪಾಂತರವು ಇರುವುದನ್ನು ಖಚಿತಪಡಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಪಂಚಾಯತ್‌ನಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದು ರೆಡ್ಡಿ ಹೇಳಿದರು. ಜನರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಕೋವಿಡ್ ಪ್ರೋಟೋಕಾಲ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಆಗ್ರಹಿಸಿದರು.

ಡೆಲ್ಟಾ-ಪ್ಲಸ್ 'ಡೆಲ್ಟಾ' ರೂಪಾಂತರದ ಸ್ವರೂಪವಾಗಿದ್ದು  ಇದು ದೇಶದಲ್ಲಿ ಎರಡನೇ ಕೊರೋನಾ ಅಲೆ ಸೋಂಕುಗಳಿಗೆ ಉತ್ತೇಜನ ನೀಡಲು ಕಾರಣವಾಗಿದೆ.

ಹುಡುಗ ತಂಗುವ ವಾರ್ಡ್ ಅನ್ನು 'ದೊಡ್ಡ ಸಮುದಾಯ ಕ್ಲಸ್ಟರ್ ಪ್ರದೇಶ' ಎಂದು ಗೊತ್ತುಪಡಿಸಲಾಗಿದೆ, ಅಲ್ಲಿ ಪರೀಕ್ಷಾ ಪಾಸಿಟಿವಿಟಿ ಪ್ರಮಾಣವು ಶೇಕಡಾ 18.42 ರಷ್ಟಿದೆ, ಇದು ಸೋಮವಾರ ರಾಜ್ಯದ ಸರಾಸರಿಗಿಂತ ಹೆಚ್ಚಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT