ಕುನ್ವರ್ ವಿಜಯ್ ಎಎಪಿ ಪಕ್ಷಕ್ಕೆ ಸೇರ್ಪಡೆ 
ದೇಶ

ಪಂಜಾಬ್ ಚುನಾವಣೆಗೂ ಮುನ್ನ ಮಾಜಿ ಪೊಲೀಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಎಎಪಿಗೆ ಸೇರ್ಪಡೆ

2015ರ ಕೋಟ್‌ಕಾಪುರ ಪೊಲೀಸ್ ಗುಂಡಿನ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎಸ್‌ಐಟಿ ಭಾಗವಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಅಮೃತಸರ: 2015ರ ಕೋಟ್‌ಕಾಪುರ ಪೊಲೀಸ್ ಗುಂಡಿನ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎಸ್‌ಐಟಿ ಭಾಗವಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅಮೃತಸರಕ್ಕೆ ತೆರಳಿದ್ದು, ಪಂಜಾಬ್ ಮಾಜಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ವಿಜಯ್ ಪ್ರತಾಪ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು.

'ಕುನ್ವರ್ ವಿಜಯ್ ಪ್ರತಾಪ್ ಎಎಪಿ ಕುಟುಂಬದ ಭಾಗವಾಗಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಭಗವಂತ್ ಮನ್ ಹೇಳಿದ್ದಾರೆ. 

2029ರಲ್ಲಿ ಕುನ್ವರ್ ವಿಜಯ್ ಪ್ರತಾಪ್ ನಿವೃತ್ತರಾಗಬೇಕಿತ್ತು. ಆದರೆ ಅದಕ್ಕೂ ಮುನ್ನ ರಾಜಿನಾಮೆ ನೀಡಿದ್ದು ಪ್ರತಾಪ್ ಅವರ ರಾಜೀನಾಮೆಯನ್ನು ಸ್ವೀಕರಿಸಲು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆರಂಭದಲ್ಲಿ ನಿರಾಕರಿಸಿದ್ದರು. ಆದರೆ ಮಾಜಿ ಐಜಿ ಶ್ರೇಣಿಯ ಅಧಿಕಾರಿ ತಮ್ಮ ತೀರ್ಮಾನಕ್ಕೆ ಬಲವಾಗಿ ಅಂಟಿಕೊಂಡಿದ್ದರಿಂದ ಮುಖ್ಯಮಂತ್ರಿಗಳು ಅವರ ಅಕಾಲಿಕ ನಿವೃತ್ತಿ ಕೋರಿಕೆಯನ್ನು ಸ್ವೀಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT