ಪ್ರಶಾಂತ್ ಕಿಶೋರ್-ಶರದ್ ಪವಾರ್ 
ದೇಶ

2024 ಚುನಾವಣೆಗೆ ಬಿಜೆಪಿ ವಿರೋಧಿ ಮೈತ್ರಿ?: ಪ್ರಶಾಂತ್ ಕಿಶೋರ್, ಪವಾರ್ 2ನೇ ಬಾರಿ ಮಾತುಕತೆ!

ಬಿಜೆಪಿ ವಿರುದ್ಧ ಮೂರನೇ ಫ್ರಂಟ್ ರಚನೆಯಾಗುವ ಬಗ್ಗೆ ಊಹಾಪೋಹಗಳ ನಡುವೆ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಭೇಟಿಯಾಗಿ ಚರ್ಚೆ ನಡೆಸಿದರು. 

ನವದೆಹಲಿ: ಬಿಜೆಪಿ ವಿರುದ್ಧ ಮೂರನೇ ಫ್ರಂಟ್ ರಚನೆಯಾಗುವ ಬಗ್ಗೆ ಊಹಾಪೋಹಗಳ ನಡುವೆ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಭೇಟಿಯಾಗಿ ಚರ್ಚೆ ನಡೆಸಿದರು. 

ಶರದ್ ಪವಾರ್ ಅವರ ನಿವಾಸದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಇನ್ನು ಕಳೆದ ಎರಡು ವಾರದಲ್ಲಿ ಇದು ಎರಡನೇ ಭೇಟಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಎನ್‌ಸಿಪಿಯ ಸಾಮಾನ್ಯ ಸಭೆಗೂ ಒಂದು ದಿನ ಮೊದಲು ಪ್ರಶಾಂತ್ ಕಿಶೋರ್ ಮತ್ತು ಪವಾರ್ ಸಭೆ ನಡೆಸಿದ್ದಾರೆ. 

ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನಲ್ಲಿ ಪ್ರಶಾಂತ್ ಕಿಶೋರ್ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕೂ ಮುನ್ನ ಜೂನ್ 11ರಂದು ಪವಾರ್ ಅವರನ್ನು ಭೇಟಿ ಮಾಡಲಾಗಿತ್ತು. ಇದು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡುತ್ತಿರುವುದಕ್ಕೆ ಸಾಕ್ಷಿಯಾಗಿತ್ತು. 

ಮೂಲಗಳ ಪ್ರಕಾರ, ಮಾಜಿ ಹಣಕಾಸು ಸಚಿವ ಪ್ರಸ್ತುತ ಟಿಎಂಸಿ ಮುಖಂಡ ಯಶ್ವಂತ್ ಸಿನ್ಹಾ, ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ನಾಯಕ ಮನೋಜ್ ಝಾ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ಮುಖಂಡ ಸಂಜಯ್ ಸಿಂಗ್ ಕೂಡ ಮಂಗಳವಾರ ಪವಾರ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

2014ರ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಪರ ಕೆಲಸ ಮಾಡಿದ್ದ ಕಿಶೋರ್ ನಂತರ ಎನ್ ಡಿಎ ವಿರೋಧಿ ಪಕ್ಷಗಳಿಗೆ ಚುನಾವಣೆ ತಂತ್ರಗಾರರಾಗಿ ಕೆಲಸ ಮಾಡಿದ್ದಾರೆ. 

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪರ ಚುನಾವಣಾ ಕಾರ್ಯತಂತ್ರವನ್ನು ರೂಪಿಸಿದ್ದರು. ಇನ್ನು 2015ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಮತ್ತು ಆರ್‌ಜೆಡಿ ಮೈತ್ರಿಕೂಟದ ಚುನಾವಣಾ ತಂತ್ರಗಾರರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್