ಕಾಶ್ಮೀರದಲ್ಲಿ ಸೇನಾ ಎನ್ಕೌಂಟರ್ 
ದೇಶ

ಪೊಲೀಸರು, ಕೌನ್ಸಿಲರ್ ಗಳು, ನಾಗರೀಕರ ಸಾವಿಗೆ ಕಾರಣನಾಗಿದ್ದ ಲಷ್ಕರ್ ಉಗ್ರ ಮುದಸಿರ್ ಸೇರಿದಂತೆ 3 ಉಗ್ರರು ಸೇನಾ ಎನ್ ಕೌಂಟರ್ ನಲ್ಲಿ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 3 ಪೊಲೀಸರು, ಇಬ್ಬರು ಕೌನ್ಸಿಲರ್ ಗಳು, 2 ನಾಗರೀಕರ ಸಾವಿಗೆ ಕಾರಣರಾಗಿದ್ದ ಪ್ರಮುಖ ಲಷ್ಕರ್ ಉಗ್ರ ಮುದಸಿರ್ ಸೇರಿದಂತೆ ಒಟ್ಟು 3 ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 3 ಪೊಲೀಸರು, ಇಬ್ಬರು ಕೌನ್ಸಿಲರ್ ಗಳು, 2 ನಾಗರೀಕರ ಸಾವಿಗೆ ಕಾರಣರಾಗಿದ್ದ ಪ್ರಮುಖ ಲಷ್ಕರ್ ಉಗ್ರ ಮುದಸಿರ್ ಸೇರಿದಂತೆ ಒಟ್ಟು 3 ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿದ್ದಾರೆ.

ಕಾಶ್ಮೀರದ ಸೋಪೋರ್ ಜಿಲ್ಲೆಯ ಗುಂಡ್ ಬ್ರಾತ್ ಪ್ರದೇಶದಲ್ಲಿ ನಡೆದ ಮ್ಯಾರಥಾನ್ ಎನ್ ಕೌಂಟರ್ ನಲ್ಲಿ ಲಷ್ಕರ್ ಸಂಘಟನೆಯ ಪ್ರಮುಖ ಕಮಾಂಡರ್ ಮುದಸಿರ್ ಪಂಡಿತ್ ಮತ್ತು ವಿದೇಶಿ ಉಗ್ರ ಪಾಕ್ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ ಸೇರಿದಂತೆ ಮೂರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು, ಕಾಶ್ಮೀರದಲ್ಲಿ 3 ಪೊಲೀಸರು, ಇಬ್ಬರು ಕೌನ್ಸಿಲರ್ ಗಳು, 2 ನಾಗರೀಕರ ಸಾವಿಗೆ ಕಾರಣರಾಗಿದ್ದ ಲಷ್ಕರ್ ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿದೆ. ಈ ಪೈಕಿ ಲಷ್ಕರ್ ಸಂಘಟನೆಯ ಪ್ರಮುಖ ಕಮಾಂಡರ್ ಮುದಸಿರ್  ಪಂಡಿತ್ ಮತ್ತು ವಿದೇಶಿ ಉಗ್ರ ಪಾಕ್ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ ಕೂಡ ಸೇರಿದ್ದಾರೆ ಎಂದು ಹೇಳಿದರು. ಈ ಪೈಕಿ ವಿದೇಶಿ ಉಗ್ರ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ 2018ರವರೆಗೂ ಉತ್ತರ ಕಾಶ್ಮೀರದಲ್ಲಿ ಸಕ್ರಿಯವಾಗಿ ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂದು ವಿಜಯ್ ಕುಮಾರ್ ಮಾಹಿತಿ  ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT