ಗುಪ್ಕಾರ್ ಮೈತ್ರಿಕೂಟದ ನಾಯಕರು (ಸಂಗ್ರಹ ಚಿತ್ರ) 
ದೇಶ

ಕೇಂದ್ರದ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಲು ಗುಪ್ಕಾರ್ ಮೈತ್ರಿಕೂಟ ನಿರ್ಧಾರ: ಆರ್ಟಿಕಲ್ 370 ಮರುಸ್ಥಾಪನೆಗೆ ಬೇಡಿಕೆ 

ಪ್ರಧಾನಿ ನರೇಂದ್ರ ಮೋದಿ ಜೂ.24 ರಂದು ಆಯೋಜಿಸಿರುವ ಜಮ್ಮು-ಕಾಶ್ಮೀರ ಸರ್ವಪಕ್ಷಗಳ ಸಭೆಯಲ್ಲಿ ಭಾಗಿಯಾಗಲು ಜಮ್ಮು-ಕಾಶ್ಮೀರದ ಗುಪ್ಕಾರ್ ಮೈತ್ರಿಕೂಟ ನಿರ್ಧರಿಸಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೂ.24 ರಂದು ಆಯೋಜಿಸಿರುವ ಜಮ್ಮು-ಕಾಶ್ಮೀರ ಸರ್ವಪಕ್ಷಗಳ ಸಭೆಯಲ್ಲಿ ಭಾಗಿಯಾಗಲು ಜಮ್ಮು-ಕಾಶ್ಮೀರದ ಗುಪ್ಕಾರ್ ಮೈತ್ರಿಕೂಟ ನಿರ್ಧರಿಸಿದೆ.

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ಮರುಸ್ಥಾಪನೆಗೆ ಹಾಗೂ ಕೈದಿಗಳನ್ನು ಬಿಡುಗಡೆ ಮಾಡುವುದಕ್ಕೆ ಆರೂ ಪಕ್ಷಗಳ ಮೈತ್ರಿಕೂಟ ಈ ಸಭೆಯಲ್ಲಿ ಒತ್ತಾಯಿಸಲಿವೆ.

"ನವದೆಹಲಿಯಲ್ಲಿ ಜೂ.24 ರಂದು ನಡೆಯಲಿರುವ ಸಭೆಯಲ್ಲಿ ಗುಪ್ಕಾರ್ ಮೈತ್ರಿಕೂಟದ ಎಲ್ಲಾ ಪಕ್ಷಗಳೂ ಭಾಗಿಯಾಗಲು ನಿರ್ಧರಿಸಿವೆ ಎಂದು ಗುಪ್ಕಾರ್ ಮೈತ್ರಿಕೂಟದ ಅಧ್ಯಕ್ಷ ಹಾಗೂ ಎನ್ ಸಿಯ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.

ಗುಪ್ಕಾರ್ ಮೈತ್ರಿಯ ನಾಯಕರಾದ ಫಾರೂಕ್ ಅಬ್ದುಲ್ಲಾ, ಅವರ ಪುತ್ರ ಓಮರ್ ಅಬ್ದುಲ್ಲಾ, ಪಿಡಿಪಿ ಮುಖ್ಯಸ್ಥ ಮೆಹಬೂಬಾ ಮುಫ್ತಿ ಹಾಗೂ ಸಿಪಿಎಂ ನಾಯಕ ಮೊಹಮ್ಮದ್ ಯೂಸೂಫ್ ತಾರಿಗಮಿ ಸೇರಿದಂತೆ 14 ಮಂದಿ ಜಮ್ಮು-ಕಾಶ್ಮೀರದ ನಾಯಕರಿಗೆ ಜೂ.24 ರಂದು ನಡೆಯಲಿರುವ ಸಭೆಯಲ್ಲಿ ಭಾಗವಹಿಸಲು ಆಹ್ವಾನವಿತ್ತು.

"ಕೇಂದ್ರ ಸರ್ಕಾರ ಈ ವರೆಗೂ ಸಭೆಯ ಅಜೆಂಡಾವನ್ನು ಸ್ಪಷ್ಟಪಡಿಸಿಲ್ಲ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಯಾವುದೇ ವಿಷಯ ಹಾಗೂ ಎಲ್ಲಾ ವಿಷಯಗಳನ್ನೂ ಚರ್ಚಿಸಬಹುದು. ನಮ್ಮ ನಿಲುವು ಈಗಾಗಲೇ ಎಲ್ಲರಿಗೂ ತಿಳಿದಿದೆ" ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ

"ಗುಪ್ಕಾರ್ ಮೈತ್ರಿಕೂಟದ ವಕ್ತಾರ ಸಿಪಿಐ(ಎಂ) ನ ನಾಯಕ ಮೊಹಮ್ಮದ್ ಯೂಸೂಫ್ ತಾರಿಗಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತಮ್ಮ ನಿಲುವು ಬೇಡಿಕೆಗಳನ್ನು ಪ್ರಧಾನಿ ಎದುರು ಮಂಡಿಸುವುದಾಗಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ನ ಜನತೆಗೆ ಭರವಸೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಭಾರತದ ಸಂವಿಧಾನದಲ್ಲಿ ನಮೆಗೆ ಯಾವೆಲ್ಲಾ ಖಾತರಿಗಳಿವೆಯೊ ಅವುಗಳ ರಕ್ಷಣೆ, ಸುರಕ್ಷತೆಗೆ ನಾವು ಪ್ರಧಾನಿಗಳಲ್ಲಿ ಮನವಿ ಮಾಡಲಿದ್ದೇವೆ, ಆ.05, 2019 ರ ನಿರ್ಧಾರವನ್ನೂ ಮರುಪರಿಶೀಲಿಸಲು ಪ್ರಧಾನಿಗೆ ಮನವಿ ಮಾಡುತ್ತೇವೆ" ಎಂದು ಗುಪ್ಕಾರ್ ಮೈತ್ರಿಕೂಟದ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ