ಉಚಿತ ಪಡಿತರ ಯೋಜನೆ ಮುಂದುವರಿಕೆ 
ದೇಶ

ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ಯೋಜನೆ ಮುಂದುವರಿಕೆ: ಕೇಂದ್ರ ಸರ್ಕಾರ

ಮಾರಕ ಕೊರೋನಾ ಸಾಂಕ್ರಾಮಿಕ 2ನೇ ಅಲೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನವೆಂಬರ್ ತಿಂಗಳ ಅಂತ್ಯದವರೆಗೂ ಉಚಿತ ಪಡಿತರ ವಿತರಣೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ನವದೆಹಲಿ: ಮಾರಕ ಕೊರೋನಾ ಸಾಂಕ್ರಾಮಿಕ 2ನೇ ಅಲೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ನವೆಂಬರ್ ತಿಂಗಳ ಅಂತ್ಯದವರೆಗೂ ಉಚಿತ ಪಡಿತರ ವಿತರಣೆಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ಈ ಕುರಿತಂತೆ ಬುಧವಾರ ನಡೆದ ಕೇಂದ್ರ ಸಂಪುಟಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKAY) ಅಡಿಯಲ್ಲಿ ವಿತರಿಸಲಾಗುವ ಉಚಿತ ಪಡಿತರವನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಣೆ ಮಾಡಲು ಸಂಪುಟ ಅನುಮೋದನೆ ನೀಡಿದೆ. ಸರ್ಕಾರದ ಈ  ನಿರ್ಣಯದಿಂದ ದೇಶದ ಸುಮಾರು 80 ಕೋಟಿ ಫಲಾನುಭವಿಗಳು ಇನ್ನೂ 5 ತಿಂಗಳು ಹೆಚ್ಚುವರಿ ಅಂದರೆ ನವೆಂಬರ್ ಅಂತ್ಯದವರೆಗೂ ಉಚಿತ ಪಡಿತರ ಪಡೆಯಬಹುದಾಗಿದೆ.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯಲ್ಲಿ ಬಡ ಪಿಡಿಎಸ್ (ಸಾರ್ವಜನಿಕ ವಿತರಣಾ ವ್ಯವಸ್ಥೆ) ಫಲಾನುಭವಿಗಳು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಕಡಿಮೆ ಮಾಡುವ ಸಲುವಾಗಿ ಈ ವರ್ಷದ ಜೂನ್‌ವರೆಗೆ ಎರಡು ತಿಂಗಳ ಕಾಲ ಪಿಎಂಜಿಕೆ ಯೋಜನೆಯನ್ನು  ಪುನಃ ಪರಿಚಯಿಸಲಾಗಿತ್ತು. ಆದರೆ ಇದೀಗ  ಈ ಯೋಜನೆಯನ್ನು ಮತ್ತೆ 5 ತಿಂಗಳುಗಳಿಗೆ ವಿಸ್ತರಿಸಲಾಗಿದೆ.

ಈ ಹಿಂದೆ ಜೂನ್ 7ರಂದು ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, 'ಪ್ರತಿಯೊಬ್ಬ ಬಡ ನಾಗರಿಕರೊಂದಿಗೆ ಸರ್ಕಾರವೂ ಜೊತೆಗಿರುತ್ತದೆ. ನವೆಂಬರ್‌ವರೆಗೆ ಎಲ್ಲ 80 ಕೋಟಿ ಮಂದಿಗೆ, ಉಚಿತವಾಗಿ ಧಾನ್ಯ ವಿತರಿಸಲಾಗುತ್ತದೆ. ಈ ಯೋಜನೆಯು ದೀಪಾವಳಿವರೆಗೂ ಮುಂದುವರಿಯಲಿದೆ ಎಂದು  ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT