ಮದ್ರಾಸ್ ಹೈಕೋರ್ಟ್ 
ದೇಶ

ಹೊಸ ಐಟಿ ನಿಯಮ ಪ್ರಶ್ನಿಸಿ ಮಾಧ್ಯಮಗಳ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನೋಟಿಸ್!

2021ರ ಮಾಹಿತಿ ತಂತ್ರಜ್ಞಾನ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹದಿಮೂರು ಮಾಧ್ಯಮಗಳನ್ನು ಒಳಗೊಂಡ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಶನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಚೆನ್ನೈ: 2021ರ ಮಾಹಿತಿ ತಂತ್ರಜ್ಞಾನ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹದಿಮೂರು ಮಾಧ್ಯಮಗಳನ್ನು ಒಳಗೊಂಡ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಶನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಅವರನ್ನೊಳಗೊಂಡ ನ್ಯಾಯಪೀಠವು ಪ್ರಸ್ತುತ ಅರ್ಜಿಗೆ ಕೆಲ ದಿನಗಳ ಹಿಂದೆ ಕರ್ನಾಟಕ ಸಂಗೀತಗಾರ ಟಿ.ಎಂ.ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಟ್ಯಾಗ್ ಮಾಡಿದೆ. 

ನಿರ್ದಿಷ್ಟವಾಗಿ 12, 14 ಮತ್ತು 16 ನಿಯಮಗಳ ಅಡಿಯಲ್ಲಿ ಯಾವುದೇ ದಬ್ಬಾಳಿಕೆ ಮತ್ತು ಬಲವಂತದ ಕ್ರಮಗಳನ್ನು ತೆಗೆದುಕೊಂಡರೆ ನ್ಯಾಯಾಲಯವನ್ನು ಸಂಪರ್ಕಿಸಲು ಸಂಘಕ್ಕೆ ಮಧ್ಯಂತರ ಅವಕಾಶವನ್ನು ನ್ಯಾಯಪೀಠ ನೀಡಿದೆ. 

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಪಿ.ಎಸ್.ರಾಮನ್, ಐಟಿ ನಿಯಮಗಳ ಎರಡು ನಿಬಂಧನೆಗಳು ಸಂಘವು ಕೆರಳುವಂತೆ ಮಾಡಿದೆ. ನಿರ್ದಿಷ್ಟವಾಗಿ ನಿಯಮ 16. ಇದು ಯಾವುದೇ ಡಿಜಿಟಲ್ ಮಾಹಿತಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಗೆ ಅಧಿಕಾರ ನೀಡುವ ಸರ್ವಭಕ್ಷಕ ನಿಬಂಧನೆಯಾಗಿದೆ. ಆದ್ದರಿಂದ, ಈ ನಿಯಮಗಳ ಅಡಿಯಲ್ಲಿ ಯೂನಿಯನ್ ಯಾವುದೇ ಕ್ರಮ ತೆಗೆದುಕೊಳ್ಳದಂತೆ ತಡೆಯುವ ಮಧ್ಯಂತರ ಆದೇಶವನ್ನು ನ್ಯಾಯಾಲಯವು ಅಂಗೀಕರಿಸಬೇಕೆಂದು ಅವರು ವಾದಿಸಿದರು.

ಆದರೆ, ಈ ಹಂತದಲ್ಲಿ ಮಧ್ಯಂತರ ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದ್ದು, ಮಾಧ್ಯಮಗಳ ವಿರುದ್ಧ ಇನ್ನೂ ಯಾವುದೇ ಬಲವಂತದ ಕ್ರಮ ಕೈಗೊಂಡಿಲ್ಲ. ಈವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಂಡಿರದ ಈ ಹಂತದಲ್ಲಿ ಯಾವುದೇ ಆದೇಶವನ್ನು ನೀಡಲು ಸಾಧ್ಯವಿಲ್ಲ. ಆದಾಗ್ಯೂ, ಒಂದು ವೇಳೆ ಬಲವಂತದ ಕ್ರಮಗಳನ್ನು ಕೈಗೊಂಡರೆ ಅರ್ಜಿದಾರರು ಮಧ್ಯಂತರ ಅರ್ಜಿ ಸಲ್ಲಿಸಲು ಸ್ವಾತಂತ್ರರು ಎಂದು ನ್ಯಾಯಪೀಠ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video