ದೇಶ

ಶೋಪಿಯಾನ್ ಎನ್ಕೌಂಟರ್: ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ 

Vishwanath S

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ ವೇಳೆ ಅಪರಿಚಿತ ಉಗ್ರನೊರ್ವನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿರ್ದಿಷ್ಟ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರ ಜಿಲ್ಲೆಯ ಶಿರ್ಮಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಕಂಡ ಉಗ್ರರು ಕೂಡಲೇ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಉಗ್ರನೋರ್ವ ಹತನಾಗಿದ್ದಾನೆ.

ಹತ್ಯೆಗೀಡಾದ ಉಗ್ರನ ಗುರುತು ಮತ್ತು ಯಾವ ಸಂಘಟನೆಗೆ ಸೇರಿದ್ದವನು ಎಂಬ ಮಾಹಿತಿಗಳನ್ನು ಪತ್ತೆಹಚ್ಚಲಾಗುತ್ತಿದೆ ಎಂದರು. ಇನ್ನು ಸ್ಥಳದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ನಡೆಯುತ್ತಿದೆ ಎಂದರು.

SCROLL FOR NEXT