ಲಸಿಕೆ (ಸಂಗ್ರಹ ಚಿತ್ರ) 
ದೇಶ

ಲಸಿಕೆ ಹಾಕಿಸಿಕೊಳ್ಳದಿದ್ದಲ್ಲಿ ವೇತನವೂ ಇಲ್ಲ: ಸರ್ಕಾರಿ ನೌಕರರಿಗೆ ಉಜ್ಜನಿ ಜಿಲ್ಲಾಧಿಕಾರಿ ಕ್ರಮ!

ಮೂರನೇ ಅಲೆಗೂ ಮುನ್ನ ದೇಶಾದ್ಯಂತ ಲಸಿಕೆ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 

ಉಜ್ಜೈನ್: ಮೂರನೇ ಅಲೆಗೂ ಮುನ್ನ ದೇಶಾದ್ಯಂತ ಲಸಿಕೆ ಅಭಿಯಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 

ಮಧ್ಯಪ್ರದೇಶದ ಉಜ್ಜೈನ್ ನ ಜಿಲ್ಲಾಡಳಿತ ತನ್ನೆಲ್ಲಾ ನೌಕರರನ್ನು ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಉತ್ತೇಜಿಸಲು ವಿನೂತನ ಕ್ರಮವೊಂದನ್ನು ಕೈಗೊಂಡಿದೆ. ಉಜ್ಜೈನ್ ನಲ್ಲಿರುವ ರಾಜ್ಯ ಸರ್ಕಾರದ ನೌಕರರು ಲಸಿಕೆ ಹಾಕಿಸಿಕೊಂಡಲ್ಲಿ ಮಾತ್ರವೇ ಅವರಿಗೆ ಮಾಸಿಕ ವೇತನ ನೀಡಲಾಗುತ್ತದೆ ಎಂದು ಉಜ್ಜೈನ್ ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.

"ಜಿಲ್ಲಾಧಿಕಾರಿ ಆಶೀಶ್ ಸಿಂಗ್ ಈ ಆದೇಶ ಹೊರಡಿಸಿದ್ದು, ಜುಲೈ 31 ರ ಒಳಗೆ ಲಸಿಕೆ ಹಾಕಿಸಿಕೊಳ್ಳದೇ ಇದ್ದಲ್ಲಿ ಸರ್ಕಾರಿ ನೌಕರರಿಗೆ ವೇತನ ಬಿಡುಗಡೆ ಮಾಡುವುದಿಲ್ಲ, ಲಸಿಕೆ ಪ್ರಮಾಣಪತ್ರ ಸಲ್ಲಿಸುವ ನೌಕರರಿಗೆ ಮಾತ್ರವೇ ಜುಲೈ ತಿಂಗಳ ವೇತನವನ್ನು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಶೇ.100 ರಷ್ಟು ಲಸಿಕೆಯ ಗುರಿಯನ್ನು ತಲುಪುವುದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ವೇತನ ನೀಡುವುದರ ಜೊತೆಯಲ್ಲಿಯೇ ಲಸಿಕೆ ಪ್ರಮಾಣಪತ್ರಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. 

ವಿವಿಧ ಇಲಾಖೆಗಳ ಮುಖ್ಯಸ್ಥರಿಗೂ ದಿನ ನಿತ್ಯದ ವೇತನ ಪಡೆದು ಅಥವಾ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳ ಲಸಿಕೆಯ ಸ್ಥಿತಿಯ ಬಗ್ಗೆ ಮಾಹಿತಿ ನೀಡುವಂತೆ ನಿರ್ದೇಶನ ನೀಡಲಾಗಿದೆ. ಕೊರೋನಾದಿಂದ ಸಾವನ್ನಪ್ಪಿರುವ ಸರ್ಕಾರಿ ನೌಕರರು ಲಸಿಕೆ ಪಡೆದಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದ್ದು ಸರ್ಕಾರಿ ನೌಕರರಿಗೆ ಲಸಿಕೆ ತೆಗೆದುಕೊಳ್ಳುವುದಕ್ಕೆ ಉತ್ತೇಜಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT