ದೇಶ

ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಬದ್ಧ: ಅಮಿತ್ ಶಾ

Raghavendra Adiga

ನವದೆಹಲಿ: ಜಮ್ಮು ಮತ್ತು ಮತ್ತು ಕಾಶ್ಮೀರದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಮತ್ತು ಸಹಜ ಮತ್ತು ನ್ಯಾಯ ಸಮ್ಮತ ಚುನಾವಣೆಗಳು ರಾಜ್ಯತ್ವ ಪುನಃಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆದ ಸರ್ವ ಪಕ್ಷಗಳ ಸಭೆಯ ಬಳಿಕ ಟ್ವೀಟ್ ಮಾಡಿ ಸಚಿವರು ರಾಜ್ಯದ ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರ ಬದ್ಧವಾಗಿದೆ. ಡಿಲಿಮಿಟೇಶನ್ ಪ್ರಕ್ರಿಯೆ ಮತ್ತು ಶಾಂತಿಯುತ ಚುನಾವಣೆಗಳು ರಾಜ್ಯತ್ವವನ್ನು ಪುನಃಸ್ಥಾಪಿಸುವಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ ಎಂದು ಹೇಳಿದ್ದಾರೆ. 

SCROLL FOR NEXT