ದೇಶ

ನಿರೀಕ್ಷಣಾ ಜಾಮೀನು ಕೋರಿ ಟ್ವಿಟರ್ ಇಂಡಿಯಾ ಮುಖ್ಯಸ್ಥ ಅರ್ಜಿ!

Srinivas Rao BV

ನವದೆಹಲಿ: ಟ್ವಿಟರ್ ಇಂಡಿಯಾದ ಮುಖ್ಯಸ್ಥ ಮನೀಶ್ ಮಹೇಶ್ವರಿ ದೆಹಲಿ-ಉತ್ತರ ಪ್ರದೇಶ ಗಡಿ ಭಾಗದ ಪೊಲೀಸರು ತಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲೇ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ.

ಘಾಜಿಯಾಬಾದ್ ನಲ್ಲಿ ಮುಸ್ಲಿಂ ವ್ಯಕ್ತಿಗೆ ಥಳಿಸಿದ ಪ್ರಕರಣಕ್ಕೆ ಕೋಮು ಬಣ್ಣ ನೀಡಿದ್ದ ಪ್ರಕರಣದಲ್ಲಿ  ಮಹೇಶ್ವರಿ ಅವರ ವಿಚಾರಣೆ ನಡೆಯಬೇಕಿದೆ.

ವಿಡಿಯೋ ಕಾಲ್ ಮೂಲಕ ವಿಚಾರಣೆ ಎದುರಿಸುವುದಾಗಿ ಮಹೇಶ್ವರಿ ಹೇಳಿದ್ದರು. ಆದರೆ ಬೆಳಿಗ್ಗೆ 10.30 ಕ್ಕೆ ಹಾಜರಿರಬೇಕೆಂದು ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದರು.

ಪೊಲೀಸ್ ಠಾಣೆಯಲ್ಲಿ ನೀಡಲಾದ ಸಮಯಕ್ಕೆ ಅವರು ಹಾಜರಾಗಲಿಲ್ಲ, ಆದರೆ ಮಧ್ಯಾಹ್ನದ ವೇಳೆಗೆ ಅವರು ಹಾಜರಾಗುವ ಸಾಧ್ಯತೆ ಇದೆ ಎಂದು ಅತುಲ್ ಕುಮಾರ್ ಸೋನ್ಕರ್, ಸರ್ಕಲ್ ಆಫೀಸರ್ (ಲೋನಿ) ಮಾಹಿತಿ ನೀಡಿದ್ದಾರೆ.

ಘಾಜಿಯಾಬಾದ್ ನಲ್ಲಿ ಥಳಿತಕ್ಕೆ ಒಳಗಾಗಿದ್ದ ವೃದ್ಧ ಅಬ್ದುಲ್ ತಮ್ಮನ್ನು ಅಪಹರಿಸಿ ಥಳಿಸಿ ಜೈ ಶ್ರೀರಾಮ್ ಹಾಗೂ ವಂದೇ ಮಾತರಂ ಹೇಳುವಂತೆ ಒತ್ತಾಯಿಸಿದ್ದರು ಎಂದು ದೂರು ದಾಖಲಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ದಾರಿ ತಪ್ಪಿಸುವ ಪೋಸ್ಟ್ ಗಳನ್ನು ಹಾಕಿದ್ದಕ್ಕಾಗಿ ಕಳೆದ ವಾರ ಟ್ವಿಟರ್ ಇಂಡಿಯಾ, ಕಾಂಗ್ರೆಸ್ ನಾಯಕರು, ಹಲವು ಪತ್ರಕರ್ತರ ವಿರುದ್ಧ ಎಫ್ಐಆರ್ ನ್ನು ದಾಖಲಿಸಲಾಗಿತ್ತು.

SCROLL FOR NEXT