ಸಾಂದರ್ಭಿಕ ಚಿತ್ರ 
ದೇಶ

ಮಟನ್ ಊಟ ಹಾಕಿಸಲಿಲ್ಲ ಎಂದು ಮದುವೆ ಮುರಿದು ಬೇರೆ ಯುವತಿಯನ್ನು ಮದುವೆಯಾದ 'ಮದುಮಗ'!

ಹಬ್ಬದಲ್ಲಿ ಕಾರ್ಯಕ್ರಮದಲ್ಲಿ ಮಟನ್ ಊಟ ಹಾಕಿಸಲಿಲ್ಲ ಎಂದು ಆಕ್ರೋಶಗೊಂಡ ಮದುಮಗ ಮತ್ತೊಬ್ಬ ಯುವತಿಯನ್ನು ಮದುವೆಯಾದ ವಿಲಕ್ಷಣ ಘಟನೆ ಒಡಿಶಾದ ಜಜ್ ಪುರದಲ್ಲಿ ನಡೆದಿದೆ.

ಜಜ್ ಪುರ: ಹಬ್ಬದಲ್ಲಿ ಕಾರ್ಯಕ್ರಮದಲ್ಲಿ ಮಟನ್ ಊಟ ಹಾಕಿಸಲಿಲ್ಲ ಎಂದು ಆಕ್ರೋಶಗೊಂಡ ಮದುಮಗ ಮತ್ತೊಬ್ಬ ಯುವತಿಯನ್ನು ಮದುವೆಯಾದ ವಿಲಕ್ಷಣ ಘಟನೆ ಒಡಿಶಾದ ಜಜ್ ಪುರದಲ್ಲಿ ನಡೆದಿದೆ.

ಜಜ್ಪುರ್ ಜಿಲ್ಲೆಯ ಸುಕಿಂದಾ ಪೊಲೀಸ್ ಮಿತಿಯಲ್ಲಿರುವ ಮನತಿರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದುವೆಗೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಮಟನ್ ಊಟ ಹಾಕಿಸಲಿಲ್ಲ ಎಂಬ ಒಂದೇ ಕಾರಣಕ್ಕೆ ಮದುವೆಯನ್ನೇ ಮುರಿದುಕೊಳ್ಳಲಾಗಿದೆ. ನೆರೆಯ ಕಿಯೋಂಘರ್ ಜಿಲ್ಲೆಯ ರೆಬನಪಲಸ್ಪಾಲ್ ಗ್ರಾಮದ ನಿವಾಸಿ  27 ವರ್ಷದ ರಾಮಕಾಂತ್ ಪತ್ರಾ ತನ್ನ ಮದುವೆಯನ್ನು ರದ್ದು ಮಾಡಿದ್ದಾನೆ.

ಮೂಲಗಳ ಪ್ರಕಾರ ಮದುವೆಗೂ ಮುನ್ನ ನಡೆದ ವರನ ಕಡೆಯವರಿಗೆ ಮದುವೆ ನಡೆಯುವ ಗ್ರಾಮದಲ್ಲಿ ಔತಣಕೂಟ ಆಯೋಜನೆ ಮಾಡಲಾಗಿತ್ತು. ಈ ಔತಣಕೂಟದಲ್ಲಿ ಮಟನ್ ಅಡುಗೆ ಮಾಡಿಸುವಂತೆ ವರನ ಕಡೆಯವರು ಕೇಳಿದ್ದರು. ಆದರೆ ವಧುವಿನ ಕಡೆಯವರು ಮಟನ್ ಅಡುಗೆ ಮಾಡಿಸಿರಲಿಲ್ಲ. ಇದೇ  ಕಾರಣಕ್ಕೆ ಆಕ್ರೋಶಗೊಂಡ ರಾಮಕಾಂತ್ ಪತ್ರಾ ವಧುವಿನ ಸಂಬಂಧಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದಾರೆ. ವಧುವಿನ ಕುಟುಂಬ ಸದಸ್ಯರು ಮನವಿ ಮಾಡಿದರೂ, ಆತ ಸಮಾಧಾನಗೊಳ್ಳಲಿಲ್ಲ. ಅಲ್ಲದೆ ಮದುವೆಯನ್ನೇ ಮುರಿದುಕೊಂಡು, ಹೋಗಿದ್ದಾನೆ. 

ಬಳಿಕ ವರ ಮತ್ತು ಅವನ ಸಂಬಂಧಿಕರು ಕುಹಿಕಾ ಪಂಚಾಯಿತಿಯ ಗಾಂಧಪಾಲ ಗ್ರಾಮದಲ್ಲಿರುವ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಬಳಿಕ ಸಂಬಂಧಿಕರ ಮಾತಿನಂತೆ ತಮ್ಕಾ ಪೊಲೀಸ್ ವ್ಯಾಪ್ತಿಯಲ್ಲಿ ಫುಲಾಜರಾ ಪ್ರದೇಶದ ಹುಡುಗಿಯನ್ನು ಮದುವೆಯಾಗಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ  ಸ್ಥಳೀಯ ಪೊಲೀಸರಿಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಲಾಗಿದೆ.

1980 ರ ದಶಕದಲ್ಲಿ ಇಂತಹ ಘಟನೆಗಳು ಸುದ್ದಿಯಾಗುತ್ತಿತ್ತು. ಆದರೆ ಈಗಲೂ ಸಹ ಕ್ಷುಲ್ಲಕ ವಿಚಾರಕ್ಕೆ ಮದುವೆ ಮುರಿದುಕೊಂಡಿರುವುದು ಸುದ್ದಿಗೆ ಗ್ರಾಸವಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT