ಸಂಗ್ರಹ ಚಿತ್ರ 
ದೇಶ

ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮ ನಿವಾಸಿ ಪ್ರಮಾಣಪತ್ರ ನೀಡಿದ ಮಾಜಿ ಕೌನ್ಸಿಲರ್ ಸೆರೆ

ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮವಾಗಿ ನಿವಾಸಿ ಪ್ರಮಾಣಪತ್ರವನ್ನು (residence certificate) ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್ ಅವರನ್ನು ಬಂಧಿಸಲಾಗಿದ್ದು, ಇದು ಮತದಾನದ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋರ್ಟ್ ಬ್ಲೇರ್: ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮವಾಗಿ ನಿವಾಸಿ ಪ್ರಮಾಣಪತ್ರವನ್ನು (residence certificate) ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್ ಅವರನ್ನು ಬಂಧಿಸಲಾಗಿದ್ದು, ಇದು ಮತದಾನದ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೀಸಾ ಅವಧಿ ಮುಗಿದ ಕಾರಣ ಬಾಂಗ್ಲಾದೇಶದ ನಾಗರಿಕ ನಯನ್ ಸರ್ಕಾರ್ ಮತ್ತು ಅವರ ಕುಟುಂಬ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಕ್ರಮವಾಗಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಾಜಿ ಕೌನ್ಸಿಲರ್ ಸಂಜಯ್ ಮೆಶಾಕ್ ಅವರು ನಯನ್ ಸರ್ಕಾರ್, ಅವರ ಸಹೋದರ ಮತ್ತು ಪೋಷಕರಿಗೆ ನಿವಾಸಿ  ಪ್ರಮಾಣಪತ್ರಗಳನ್ನು ನೀಡಿದ್ದರು.

ಈ ಪ್ರಮಾಣಪತ್ರಗಳು ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಪಡೆಯಲು ಸಹಾಯ ಮಾಡಿದೆ. ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ಉಳಿದುಕೊಂಡಿದ್ದಕ್ಕಾಗಿ ಸರ್ಕಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಸರ್ಕಾರ್ ಮತ್ತು ಅವರ ಕುಟುಂಬ ಸದಸ್ಯರಿಗೆ ನಿವಾಸಿ  ಪ್ರಮಾಣಪತ್ರವನ್ನು ನೀಡಿದ ಆರೋಪದ ಮೇಲೆ ಮೆಶಾಕ್‌ನನ್ನು ಬಂಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಯಾವುದೇ ಬಾಂಗ್ಲಾದೇಶಿ ಕಾನೂನುಬಾಹಿರವಾಗಿ ದ್ವೀಪಗಳಲ್ಲಿ ಉಳಿದುಕೊಂಡಿರುವ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಗೆ ವಿನಂತಿಸಿದರು. ಅಲ್ಲದೆ ಹಾಗೆ ಮಾಹಿತಿ ನೀಡಿದ ಮಾಹಿತಿದಾರರ ಹೆಸರನ್ನು ರಹಸ್ಯವಾಗಿಡಲಾಗುವುದು ಎಂದರು.

233307, 232586, 100, ನತ್ತು 9474290250 ದೂರವಾಣಿ ಸಂಖ್ಯೆಗೆ ಕರೆಮಾಡಿ ಅಥವಾ  shoccs.and.nic.in. ಈ ಮೇಲ್ ಮೂಲಕ ಮಾಹಿತಿ ನೀಡಬಹುದಾಗಿದೆ. ಕೇಂದ್ರಾಡಳಿತ  ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಂದ ಅಕ್ರಮವಾಗಿ ವಲಸೆ ಬಂದವರನ್ನು ಪತ್ತೆ ಹಚ್ಚಲು ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT