ಶರದ್ ಪವಾರ್ 
ದೇಶ

ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಸುಗಮವಾಗಿ ನಡೆಯುತ್ತಿದೆ, 5 ವರ್ಷ ಪೂರ್ಣಗೊಳಿಸುತ್ತೆ: ಶರದ್ ಪವಾರ್

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರ ಸುಗಮವಾಗಿ ನಡೆಯುತ್ತಿದೆ. ಅಲ್ಲದೆ ಅದು ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಪುಣೆ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರ ಸುಗಮವಾಗಿ ನಡೆಯುತ್ತಿದೆ. ಅಲ್ಲದೆ ಅದು ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಸಾಮಾನ್ಯ ಕಾರ್ಯಕ್ರಮದಲ್ಲಿ ಈ ಸರ್ಕಾರವನ್ನು ನಡೆಯಲು ನಿರ್ಧರಿಸಲಾಯಿತು. ಆದರೆ ಸರ್ಕಾರ ನಡೆಸುವಾಗ ಅಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಯಾಂತ್ರಿಕ ವ್ಯವಸ್ಥೆ ಇರಬೇಕು ಎಂದು ನಿರ್ಧರಿಸಲಾಯಿತು ಎಂದು ಪವಾರ್ ಹೇಳಿದರು. 

2019ರ ವಿಧಾನಸಭಾ ಚುನಾವಣೆಯ ನಂತರ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸರ್ಕಾರ ರಚಿಸಲಾಯಿತು. ಅಲ್ಲದೆ ಮೂರು ಪಕ್ಷಗಳ ಕೆಲವು ನಾಯಕರಿಗೆ ಜವಾಬ್ದಾರಿಯನ್ನು ನೀಡಲು ನಿರ್ಧರಿಸಲಾಯಿತು ಎಂದರು. 

ಯಾಂತ್ರಿಕ ತಂಡದಲ್ಲಿ ಕಾಂಗ್ರೆಸ್ನ ಬಾಲಾಸಾಹೇಬ್ ಥೋರತ್ ಮತ್ತು ಅಶೋಕ್ ಚವಾಣ್, ಶಿವಸೇನೆಯ ಏಕನಾಥ್ ಶಿಂಧೆ ಮತ್ತು ಸುಭಾಷ್ ದೇಸಾಯಿ ಮತ್ತು ಎನ್‌ಸಿಪಿಯಿಂದ ಅಜಿತ್ ಪವಾರ್ ಮತ್ತು ಜಯಂತ್ ಪಾಟೀಲ್ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಪವಾರ್ ಹೇಳಿದರು.

ಯಾವುದೇ ಸಮಸ್ಯೆ ಅಥವಾ ನೀತಿ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾದರೆ ಈ ಪಕ್ಷಗಳ ಎಲ್ಲಾ ಆರು ನಾಯಕರು ಭೇಟಿಯಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದರು.

ಎಂವಿಎ ಸರ್ಕಾರ ಸುಗಮವಾಗಿ ನಡೆಯುತ್ತಿದೆ. ಎಲ್ಲರೂ ಒಂದೇ ವಿಧಾನವನ್ನು ಬಳಸಿಕೊಂಡು ಮುಂದೆ ಹೋಗಲು ಬಯಸುತ್ತಿರುವುದರಿಂದ, ಈ ಸರ್ಕಾರವು ಎಲ್ಲಾ ಐದು ವರ್ಷಗಳ ಕಾಲ ಉಳಿಯುತ್ತದೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ ಎಂದು ಪವಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT