ರಕ್ಷಣಾ ಸಚಿವ ರಾಜನಾಥ್ ಸಿಂಗ್ 
ದೇಶ

ಜಮ್ಮು ವಾಯುನೆಲೆಯಲ್ಲಿ ಅವಳಿ ಸ್ಫೋಟ: ವೈಸ್ ಏರ್ ಚೀಫ್ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತುಕತೆ 

ಭಾನುವಾರ ಬೆಳಗಿನ ಜಾವ ಜಮ್ಮು-ಕಾಶ್ಮೀರದ ಭಾರತೀಯ ವಾಯು ನೆಲೆಯಲ್ಲಿ ಸಂಭವಿಸಿರುವ ಎರಡು ಕಡಿಮೆ ತೀವ್ರತೆಯ ಸ್ಫೋಟ ಭಯೋತ್ಪಾದಕ ದಾಳಿಯೇ ಎಂಬ ಆಯಾಮದಲ್ಲಿ ರಕ್ಷಣಾ ಮತ್ತು ಭದ್ರತಾ ಕೇಂದ್ರದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ನವದೆಹಲಿ: ಭಾನುವಾರ ಬೆಳಗಿನ ಜಾವ ಜಮ್ಮು-ಕಾಶ್ಮೀರದ ಭಾರತೀಯ ವಾಯು ನೆಲೆಯಲ್ಲಿ ಸಂಭವಿಸಿರುವ ಎರಡು ಕಡಿಮೆ ತೀವ್ರತೆಯ ಸ್ಫೋಟ ಭಯೋತ್ಪಾದಕ ದಾಳಿಯೇ ಎಂಬ ಆಯಾಮದಲ್ಲಿ ರಕ್ಷಣಾ ಮತ್ತು ಭದ್ರತಾ ಕೇಂದ್ರದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಘಟನೆ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ವಾಯುಪಡೆಯ ಉಪ ಏರ್ ಚೀಫ್, ಏರ್ ಮಾರ್ಷಲ್ ಹೆಚ್ ಎಸ್ ಅರೋರ ಅವರ ಜೊತೆ ಮಾತುಕತೆ ನಡೆಸಿದ್ದಾರೆ.

ಭಾರತೀಯ ವಾಯುಪಡೆಯ ಹಲವು ವಸ್ತುಗಳನ್ನು ಹೊಂದಿರುವ ವಿಮಾನ ನಿಲ್ದಾಣದಲ್ಲಿ ಸ್ಫೋಟಕವನ್ನಿಡಲು ಡ್ರೋನ್ ಗಳ ಸಹಾಯವನ್ನು ಪಡೆದಿರುವ ಸಾಧ್ಯತೆಯನ್ನು ತನಿಖಾಧಿಕಾರಿಗಳು ಪರೀಕ್ಷೆ ಮಾಡುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ. ಜಮ್ಮು ವಾಯುಪಡೆ ನಿಲ್ದಾಣದ ತಾಂತ್ರಿಕ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಎರಡು ಕಡಿಮೆ-ತೀವ್ರತೆಯ ಸ್ಫೋಟಗಳು ವರದಿಯಾಗಿದೆ ಮತ್ತು ಅವುಗಳಲ್ಲಿ ಒಂದು ಕಟ್ಟಡದ ಮೇಲ್ಛಾವಣಿಗೆ ಸಣ್ಣ ಹಾನಿಯಾಗಿದೆ ಮತ್ತು ಮತ್ತೊಂದು ತೆರೆದ ಪ್ರದೇಶದಲ್ಲಿ ಸ್ಫೋಟಗೊಂಡಿದೆ. ಯಾವುದೇ ಸಲಕರಣೆಗಳಿಗೆ ಹಾನಿಯಾಗಿಲ್ಲ. ನಾಗರಿಕ ಸಂಸ್ಥೆಗಳ ಜೊತೆಗೆ ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದೆ.

ಭಯೋತ್ಪಾದಕ ಸಂಘಟನೆಗಳು ಇದರಲ್ಲಿ ಭಾಗಿಯಾಗಿರಬಹುದೇ ಎಂಬ ಕುರಿತು ಕೂಡ ತನಿಖೆ ಮಾಡಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಸ್ಥಳಕ್ಕೆ ಧಾವಿಸಲಿದ್ದಾರೆ ಎಂದು ಹೇಳಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದಿನಿಂದ ಮೂರು ದಿನಗಳ ಕಾಲ ಬಾಂಗ್ಲಾದೇಶ ಪ್ರವಾಸದಲ್ಲಿದ್ದು ಜಮ್ಮು-ಲಡಾಕ್ ಗೂ ಮಾರ್ಗ ಮಧ್ಯೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT