ಹರ್ಷವರ್ಧನ್ 
ದೇಶ

ಭಾರತದಲ್ಲಿ ಇಲ್ಲಿಯವರೆಗೂ 40,845 ಬ್ಲಾಕ್ ಫಂಗಸ್ ಪ್ರಕರಣ ಪತ್ತೆ: ಕೇಂದ್ರ

ದೇಶದಲ್ಲಿ ಈವರೆಗೆ ಒಟ್ಟು 40,845 ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 31,344 ಖಡ್ಗಮೃಗದ ಸ್ವರೂಪದಲ್ಲಿದ್ದು ಸೋಂಕಿನಿಂದ ಇಲ್ಲಿಯವರೆಗೂ 3,129 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ತಿಳಿಸಿದ್ದಾರೆ.

ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 40,845 ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 31,344 ಖಡ್ಗಮೃಗದ ಸ್ವರೂಪದಲ್ಲಿದ್ದು ಸೋಂಕಿನಿಂದ ಇಲ್ಲಿಯವರೆಗೂ 3,129 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ತಿಳಿಸಿದ್ದಾರೆ.

ಕೋವಿಡ್ ಕುರಿತ ಉನ್ನತ ಮಟ್ಟದ ಮಂತ್ರಿಗಳ ಗುಂಪಿನ(ಜಿಒಎಂ) 29ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ವರ್ಧನ್ ಅವರು, ಒಟ್ಟು ಸಂಖ್ಯೆಯಲ್ಲಿ ಕೋವಿಡ್ ನಿಂದ 34,940 ರೋಗಿಗಳು(85.5 ಶೇಕಡಾ), ಮಧಮೇಹದಿಂದ 26,187(ಸುಮಾರು 64.11 ಶೇಕಡಾ) ಹಾಗೂ ಸ್ಟೀರಾಯ್ಡ್ ನಿಂದ 21,523 ರೋಗಿಗಳಿಗೆ ಬಂದಿದೆ. 

ಒಟ್ಟು 13,083 ರೋಗಿಗಳು 18-45 ವರ್ಷ ವಯಸ್ಸಿನವರಾಗಿದ್ದಾರೆ, 17,464 ಜನರು 45-60 ವರ್ಷ ವಯಸ್ಸಿನವರಾಗಿದ್ದು ಅಲ್ಲದೆ 10,082 ರೋಗಿಗಳು 60 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಕುರಿತು ಮಾತನಾಡಿದ ವರ್ಧನ್, 'ಭಾರತವು ಕೋವಿಡ್ ವ್ಯಾಕ್ಸಿನೇಷನ್‌ನಲ್ಲಿ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಇದುವರೆಗೆ ನೀಡಲಾದ ಒಟ್ಟು ಕೋವಿಡ್ ಲಸಿಕೆ ಡೋಸ್ ಗಳ ಪೈಕಿ ಭಾರತ ಅಮೆರಿಕವನ್ನು ಹಿಂದಿಕ್ಕಿದೆ. ಅಮೆರಿಕ ಕೋವಿಡ್ ವಿರುದ್ಧ ಲಸಿಕೆ ನೀಡಲು ಪ್ರಾರಂಭಿಸಿದ್ದು 2020ರ ಡಿಸೆಂಬರ್ 14ರಿಂದ ಆದರೆ ಭಾರತ ಡ್ರೈವ್ ಅನ್ನು 2021ರ ಜನವರಿ 16ರಿಂದ ಪ್ರಾರಂಭಿಸಿತ್ತು.

ಕೋವಿಡ್ ವ್ಯಾಕ್ಸಿನೇಷನ್‌ನ ಹೊಸ ನೀತಿಯಡಿಯಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಲಸಿಕೆ ತಯಾರಕರು ಉತ್ಪಾದಿಸುತ್ತಿರುವ ಶೇಕಡಾ 75ರಷ್ಟು ಲಸಿಕೆಗಳನ್ನು ಸಂಗ್ರಹಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸುತ್ತಿದೆ ಎಂದು ಹರ್ಷವರ್ಧನ್ ತಿಳಿಸಿದರು.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇವಲ 46,148 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳು ಗಮನಾರ್ಹವಾಗಿ 5,72,994ಕ್ಕೆ ಇಳಿದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT