ಕೆಂಪುಕೋಟೆ ಗಲಭೆ ಮತ್ತು ಬಂಧಿತ ಆರೋಪಿ ಗುರ್ಜೋತ್ ಸಿಂಗ್) 
ದೇಶ

ಕೆಂಪುಕೋಟೆ ಗಲಭೆ ಪ್ರಕರಣ: ಪ್ರಮುಖ ಆರೋಪಿ ಗುರ್ಜೋತ್ ಸಿಂಗ್ ಬಂಧನ

ಕೃಷಿ ಕಾನೂನು ವಿರೋಧಿ ಹೋರಾಟ ಮತ್ತು ಕೆಂಪುಕೋಟೆಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಗುರ್ಜೋತ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಅಮೃತ್ ಸರ: ಕೃಷಿ ಕಾನೂನು ವಿರೋಧಿ ಹೋರಾಟ ಮತ್ತು ಕೆಂಪುಕೋಟೆಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಗುರ್ಜೋತ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಪಂಜಾಬ್ ನ ಅಮೃತ್ ಸರದಲ್ಲಿ ಗುರ್ಜೋತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದು, ಈತನ ಬಂಧನಕ್ಕಾಗಿ ದೆಹಲಿ ಮತ್ತು ಪಂಜಾಬ್ ಪೊಲೀಸರು ಬಲೆ ಬೀಸಿದ್ದರು. ಅಲ್ಲದೆ ಈತನ ಕುರಿತು ಮಾಹಿತಿ ನೀಡಿದವರಿಗೆ 1 ಲಕ್ಷ ರೂ ಬಹುಮಾನ ಕೂಡ ಘೋಷಣೆ ಮಾಡಿದ್ದರು. 

ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿಯ ವಿಶೇಷ ವಿಭಾಗದ ಡಿಸಿಪಿ ಸಂಜೀವ್ ಯಾದವ್ ಅವರು, ಕೆಂಪು ಕೋಟೆ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಮೂಲದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರ ವಿಶೇಷ ವಿಭಾಗವು ಬಂಧಿಸಿದೆ. ಆರೋಪಿಯನ್ನು ಗುರ್ಜೋತ್‌ ಸಿಂಗ್‌ ಎಂದು  ಗುರುತಿಸಲಾಗಿದ್ದು, ಈತನನ್ನು ಅಮೃತಸರದಲ್ಲಿ ಬಂಧಿಸಲಾಗಿದೆ. ಗುರ್ಜೋತ್‌ ಸಿಂಗ್‌ ಪತ್ತೆಗಾಗಿ ಇಲಾಖೆಯು 1 ಲಕ್ಷ ರೂ ನಗದು ಬಹುಮಾನ ಘೋಷಿಸಿತ್ತು ಎಂದು ಹೇಳಿದ್ದಾರೆ.

ಜನವರಿ 26, ಗಣರಾಜ್ಯೋತ್ಸವ ದಿನದಂದು ಸಾವಿರಾರು ರೈತರು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಟ್ಯ್ರಾಕ್ಟರ್‌ ರ‍್ಯಾಲಿ ನಡೆಸಿದ್ದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ಸಂಭವಿಸಿತ್ತು. ಆಗ ಕೆಲವು ಪ್ರತಿಭಟನಕಾರರು ಕೆಂಪು ಕೋಟೆ ಮೇಲೆ ಹತ್ತಿ ಧರ್ಮ ಸೂಚಕ  ಧ್ವಜವನ್ನು ಹಾರಿಸಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT