ಸಾಂದರ್ಭಿಕ ಚಿತ್ರ 
ದೇಶ

ಲಸಿಕೆ ಪರಿಣಾಮಕಾರಿತ್ವ ಮೇಲೆ ಡೆಲ್ಟಾ ಪ್ಲಸ್ ರೂಪಾಂತರಿಯ ವ್ಯತಿರಿಕ್ತ ಪರಿಣಾಮದ ಬಗ್ಗೆ ವೈಜ್ಞಾನಿಕ ಮಾಹಿತಿ ಇಲ್ಲ: ವಿ.ಕೆ. ಪೌಲ್

ಡೆಲ್ಟಾ ಪ್ಲಸ್ ರೂಪಾಂತರ ವೈರಾಣು ಬಗ್ಗೆ ಆತಂಕಗಳು ಹೆಚ್ಚಳವಾಗುತ್ತಿರುವ ಮಧ್ಯೆ, ಹೊಸ ರೂಪಾಂತರ ಹೆಚ್ಚಾಗಿ ಹರಡಬಲ್ಲದು ಅಥವಾ ಲಸಿಕೆ ಪರಿಣಾಮಕಾರಿತ್ವವನ್ನು ಕಡಿಮೆ ಮಾಡುತ್ತದೆ ಎಂಬುದರ ಬಗ್ಗೆ ಇಲ್ಲಿಯವರೆಗೂ ಯಾವುದೇ ವೈಜ್ಞಾನಿಕ ಮಾಹಿತಿಯಿಲ್ಲ ಎಂದು ಕೋವಿಡ್ ಕಾರ್ಯಪಡೆ ಮುಖ್ಯಸ್ಥ ವಿ. ಕೆ. ಪೌಲ್ ಹೇಳಿದ್ದಾರೆ.

ನವದೆಹಲಿ: ಡೆಲ್ಟಾ ಪ್ಲಸ್ ರೂಪಾಂತರ ವೈರಾಣು ಬಗ್ಗೆ ಆತಂಕಗಳು ಹೆಚ್ಚಳವಾಗುತ್ತಿರುವ ಮಧ್ಯೆ, ಹೊಸ ರೂಪಾಂತರ ಹೆಚ್ಚಾಗಿ ಹರಡಬಲ್ಲದು ಅಥವಾ ಲಸಿಕೆ ಪರಿಣಾಮಕಾರಿತ್ವವನ್ನು ಕಡಿಮೆ ಮಾಡುತ್ತದೆ ಎಂಬುದರ ಬಗ್ಗೆ ಇಲ್ಲಿಯವರೆಗೂ ಯಾವುದೇ ವೈಜ್ಞಾನಿಕ ಮಾಹಿತಿಯಿಲ್ಲ ಎಂದು ಕೋವಿಡ್ ಕಾರ್ಯಪಡೆ ಮುಖ್ಯಸ್ಥ ವಿ. ಕೆ. ಪೌಲ್ ಹೇಳಿದ್ದಾರೆ.

ಡೆಲ್ಟಾ ಪ್ಲಸ್ ವೈರಾಣು ಕುರಿತಂತೆ ಪಿಟಿಐ ಸಂದರ್ಶನದಲ್ಲಿ ತಿಳಿಸಿದ ವಿ. ಕೆ. ಪೌಲ್, ಇದು ಹೊಸ ರೂಪಾಂತರವಾಗಿದ್ದು,  ಅದರ ಬಗ್ಗೆ ವೈಜ್ಞಾನಿಕ ಮಾಹಿತಿ ಇನ್ನೂ ಆರಂಭಿಕ ಹಂತದಲ್ಲಿದೆ. ಇದು ತೀವ್ರಗತಿಯಲ್ಲಿ ಹರಡಬಲ್ಲದೇ ಅಥವಾ ಲಸಿಕೆ ಪರಿಣಾಮಕಾರಿತ್ವದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ತಿಳಿದುಬರಬೇಕಾಗಿದೆ. ಇದರ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಕಾಯುತ್ತಿರುವುದಾಗಿ ತಿಳಿಸಿದರು.

ಡೆಲ್ಟಾ ರೂಪಾಂತರ ಕೊರೋನಾವೈರಸ್ ವಿರುದ್ಧ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಪರಿಣಾಮಕಾರಿತ್ವ ಕುರಿತಂತೆ ಪ್ರತಿಕ್ರಿಯಿಸಿದ ಪೌಲ್, ಐಸಿಎಂಆರ್ ನ ವೈಜ್ಞಾನಿಕ ಮೌಲ್ಯಮಾಪನ ಆಧಾರದ ಮೇಲೆ ಡೆಲ್ಟಾ ವೈರಸ್ ಸೇರಿದಂತೆ ಕೊರೋನಾವೈರಸ್ ವಿರುದ್ದ ಎರಡು ಲಸಿಕೆಗಳು ಪರಿಣಾಮಕಾರಿಯಾಗಿವೆ ಎಂದರು. 

ಫೈಜರ್ ಮತ್ತು ಮೊಡೆರ್ನಾದಂತಹ ವಿದೇಶಿ ಲಸಿಕೆ ತಯಾರಕರಿಗೆ ಭದ್ರತೆ ನೀಡಲು ಭಾರತ ನಿರ್ಧರಿಸಿದೆಯೇ ಎಂದು ಕೇಳಿದಾಗ, ಈ ವಿಷಯವು ಅನೇಕ ಆಯಾಮಗಳನ್ನು ಹೊಂದಿದೆ ಮತ್ತು ಅಂತಹ ವಿಷಯಗಳಿಗೆ ಸಮಯವನ್ನು ನೀಡುವುದು ಜಾಣತನವಲ್ಲ ಎಂದು ಪೌಲ್ ಹೇಳಿದರು.

ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಹೊಂದಿದ ಲಸಿಕೆಗಳಿಗೆ ದಾರಿ ಮಾಡಿಕೊಡುವ ಚರ್ಚೆ ನಡೆಯುತ್ತಿದೆ. ಈ ವಿಷಯವು ಅನೇಕ ಆಯಾಮಗಳನ್ನು ಹೊಂದಿದೆ ಮತ್ತು ನಾವು ಒಪ್ಪಿದ ಮಾರ್ಗವನ್ನು ಶೀಘ್ರದಲ್ಲಿಯೇ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ. ಕೊವಿಶೀಲ್ಡ್ ಅಂತರ-ಡೋಸ್ ಮಧ್ಯಂತರವನ್ನು ಮೂರು ತಿಂಗಳುಗಳಿಗೆ ಹೆಚ್ಚಿಸುವ ನಿರ್ಧಾರವನ್ನು ದೇಶ ತೆಗೆದುಕೊಂಡಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT