ವಿದೇಶಾಂಗ ಸಚಿವ ಎಸ್ ಜೈಶಂಕರ್ 
ದೇಶ

ಕೆಲ ತಾಲಿಬಾನ್ ಮುಖಂಡರೊಂದಿಗೆ ಜೈಶಂಕರ್ ಸಭೆ ಕುರಿತ ವರದಿಗಳು ಸಂಪೂರ್ಣ ಸುಳ್ಳು: ಮೂಲಗಳು

ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೆಲ ತಾಲಿಬಾನ್ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿರುವ ವರದಿಗಳು ಸಂಪೂರ್ಣ ಸುಳ್ಳು, ಆಧಾರ ರಹಿತ ಮತ್ತು ಹಾನಿಕಾರ ಎಂದು ಮೂಲಗಳು ಮಂಗಳವಾರ ಹೇಳಿವೆ.

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೆಲ ತಾಲಿಬಾನ್ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿರುವ ವರದಿಗಳು ಸಂಪೂರ್ಣ ಸುಳ್ಳು, ಆಧಾರ ರಹಿತ ಮತ್ತು ಹಾನಿಕಾರ ಎಂದು ಮೂಲಗಳು ಮಂಗಳವಾರ ಹೇಳಿವೆ.

ಜೈಶಂಕರ್ ಕೆಲ ತಾಲಿಬಾನ್ ಮುಖಂಡರನ್ನು ಭೇಟಿಯಾಗಿದ್ದಾರೆ ಎನ್ನಲಾದ ಸಾಮಾಜಿಕ ಜಾಲತಾಣಗಳಲ್ಲಿನ  ಕೆಲ ವರದಿಗಳ ಬೆನ್ನಲ್ಲೇ ಮೂಲಗಳಿಂದ ಈ ರೀತಿಯ ಪ್ರತಿಕ್ರಿಯೆ ಬಂದಿದೆ.

ಮುಂದೆ ಭಾರತದೊಂದಿಗಿನ ಸಂಬಂಧಗಳು ಪಾಕಿಸ್ತಾನದ ಅಭಿಪ್ರಾಯಗಳಂತೆ ಇರುವುದಿಲ್ಲ ಎಂದು ತಾಲಿಬಾನ್ ಮುಖಂಡರು ಸಚಿವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ, ಇಂತಹ ವರದಿಗಳು ಸಂಪೂರ್ಣವಾಗಿ ಸುಳ್ಳು, ಆಧಾರರಹಿತ ಎಂದು ಮೂಲವೊಂದು ಹೇಳಿದೆ.

ಸೆಪ್ಟೆಂಬರ್ 11 ರೊಳಗೆ ಅಪ್ಘಾನಿಸ್ತಾನದಿಂದ ತನ್ನ ಸೇನೆಯನ್ನು ಹಿಂಪಡೆಯಲು ಅಮೆರಿಕ ಎದುರು ನೋಡುತ್ತಿದ್ದು, ಸುಮಾರು ಎರಡು ದಶಕಗಳ ತನ್ನ ಮಿಲಿಟರಿ ನಿಯೋಜನೆಯನ್ನು ಅಂತ್ಯಗೊಳಿಸುತ್ತಿರುವುದರಿಂದ ಈ ವರದಿಗಳು ಬಂದಿವೆ. 

ಅಪ್ಘಾನ್ ಶಾಂತಿ ಪ್ರಕ್ರಿಯೆಗೆ ಸಂಬಂಧಿಸಿದ ತ್ವರಿತಗತಿಯ ಬೆಳವಣಿಗೆಗಳ ಮಧ್ಯೆ ಹಿರಿಯ ಕತಾರಿ ರಾಜತಾಂತ್ರಿಕರೊಬ್ಬರು ಇತ್ತೀಚೆಗೆ ವಾಷಿಂಗ್ಟನ್ ಡಿಸಿಯಲ್ಲಿ ಅರಬ್ ಸೆಂಟರ್ ಆಯೋಜಿಸಿದ್ದ ವೆಬ್‌ನಾರ್‌ನಲ್ಲಿ ಮಾತನಾಡುತ್ತಾ, ಭಾರತದ ಕಡೆಯವರು ತಾಲಿಬಾನ್‌ನೊಂದಿಗೆ ತೊಡಗಿಸಿಕೊಳ್ಳುವುದರಿಂದ ಈ ಗುಂಪು ಮುಂದೆ ಅಪ್ಘಾನಿಸ್ತಾನದ ಎದುರಾಳಿಯಾಗಲಿದೆ ಎಂದು ನಂಬಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT