ದೀಪ್ ಸಿದು 
ದೇಶ

ಗಣ ರಾಜ್ಯೋತ್ಸವದಂದು ಹಿಂಸಾಚಾರ: ಸಾಮಾಜಿಕ ಹೋರಾಟಗಾರ, ನಟ ದೀಪ್ ಸಿಧು ಗೆ ಮತ್ತೆ ಸಮನ್ಸ್

ಗಣ ರಾಜ್ಯೋತ್ಸವದಂದು ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಮತ್ತೆ ಸಮನ್ಸ್‌ ಜಾರಿ ಮಾಡಿದೆ. 

ನವದೆಹಲಿ: ಗಣ ರಾಜ್ಯೋತ್ಸವದಂದು ಕೆಂಪು ಕೋಟೆ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಮತ್ತು ಇತರೆ ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಮಂಗಳವಾರ ಮತ್ತೆ ಸಮನ್ಸ್‌ ಜಾರಿ ಮಾಡಿದೆ. 

ಜುಲೈ 12 ರಂದು ಎಲ್ಲಾ ಆರೋಪಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಚೀಫ್‌ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗಜೇಂದ್ರ ಸಿಂಗ್  ನಿರ್ದೇಶಿಸಿದರು.

ಈ ಹಿಂದೆ ನ್ಯಾಯಾಲಯವು ಆರೋಪಿಗಳಿಗೆ ಮಂಗಳವಾರ (ಜೂನ್‌ 29) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿತ್ತು. ಆದರೆ ಕೇವಲ ಹರ್ಜೊತ್‌ ಸಿಂಗ್‌ ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾದರು. 

‘ನ್ಯಾಯಾಲಯ ಜಾರಿಗೊಳಿಸಿದ ಸಮನ್ಸ್‌ ಆರೋಪಿಗಳಿಗೆ ಸಿಕ್ಕಿಲ್ಲ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗಿಲ್ಲ’ ಎಂದು ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಕೋರ್ಟ್‌, ಮತ್ತೊಮ್ಮೆ ಆರೋಪಿಗಳಿಗೆ ಸಮನ್ಸ್‌ ಜಾರಿಗೊಳಿಸಲಾಯಿತು.

ಜನವರಿ 26ರಂದು ಪ್ರತಿಭಟನಾಕಾರರು ಟ್ರ್ಯಾಕ್ಟರ್ ರ್‍ಯಾಲಿಗೆ ತಾವು ಒಪ್ಪಿದ ಮಾರ್ಗಗಳನ್ನು ಬಿಟ್ಟು ದೆಹಲಿ ಪ್ರವೇಶಿಸಿದ್ದರು. ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಮಾಡಿದ್ದರು. ರೈತರನ್ನು ದಾರಿ ತಪ್ಪಿಸಿ ಕೆಂಪುಕೋಟೆ ಕಡೆಗೆ ಕರೆದೊಯ್ದು ಘರ್ಷಣೆಗೆ ಕಾರಣವಾದ ಆರೋಪ ದೀಪ್ ಸಿಧು ಅವರ ಮೇಲಿದೆ. ಪದೇ ಪದೇ ಮನವಿ ಮಾಡಿದರೂ ಬಗ್ಗದ ಪ್ರತಿಭಟನಾಕಾರರು ಘರ್ಷಣೆಗೆ ಇಳಿದಿದ್ದರಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿ, ಲಾಠಿ ಚಾರ್ಜ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸಚಿವ ಸಂಪುಟ ಭಿನ್ನಮತ ಶಮನ: ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾ ರೆಡ್ಡಿ!

T20 Cricket: ನಾಯಕತ್ವದಿಂದ ಗೇಟ್ ಪಾಸ್ ಬಳಿಕ ಸೂರ್ಯಕುಮಾರ್ ಮೊದಲ ಪೋಸ್ಟ್ ವೈರಲ್!

ದಾವಣಗೆರೆ: ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನಾಭರಣ ನಾಪತ್ತೆ, ಟ್ರಸ್ಟ್ ವಿರುದ್ಧ ಗಂಭೀರ ಆರೋಪ!

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

ನಮ್ಮ ದಯೆಯಿಂದ TVK ಸರ್ಕಾರ ಉಳಿದಿದೆ: ಶೀಘ್ರದಲ್ಲೇ ಬೀಳಿಸ್ತೀವಿ- DMK ಅಧ್ಯಕ್ಷ ಸ್ಟಾಲಿನ್!

SCROLL FOR NEXT