ಸುಪ್ರೀಂಕೋರ್ಟ್ 
ದೇಶ

'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್' ಜಾರಿಗೆ ಸುಪ್ರೀಂ ಕೋರ್ಟ್ ಗಡುವು

ಮುಂದಿನ ಜುಲೈ 31 ರೊಳಗೆ 'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್'ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಗಡುವು ನೀಡಿದೆ.

ನವದೆಹಲಿ: ಮುಂದಿನ ಜುಲೈ 31 ರೊಳಗೆ 'ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್'ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಗಡುವು ನೀಡಿದೆ.

ಸಾಂಕ್ರಾಮಿಕ ರೋಗ ಮುಂದುವರಿಯುವವರೆಗೆ ಪಡಿತರವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ಇದರ ಜೊತೆಗೆ ವಲಸೆ ಕಾರ್ಮಿಕರನ್ನು ನೋಂದಾಯಿಸಲು ಪೋರ್ಟಲ್ ಸ್ಥಾಪಿಸುವಂತೆಯೂ ಕೇಂದ್ರಕ್ಕೆ ಸೂಚನೆ ಕೊಟ್ಟಿದೆ.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೋವಿಡ್-19 ರಿಂದ ಬಾಧಿತರಾದ ವಲಸೆ ಕಾರ್ಮಿಕರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೆಲ ನಿರ್ದೇಶನ ನೀಡಿದೆ.

ಈ ಯೋಜನೆಯು ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಅವರ ಕೆಲಸದ ಸ್ಥಳದಲ್ಲಿ ಮತ್ತು ಅವರ ಪಡಿತರ ಚೀಟಿಗಳನ್ನು ನೋಂದಾಯಿಸದ ಸ್ಥಳದಲ್ಲೂ ಪಡಿತರ ಪಡೆಯ ಬಹುದಾಗಿದೆ.

ಸಾಂಕ್ರಾಮಿಕ ಪರಿಸ್ಥಿತಿ ಇರುವವರೆಗೂ ವಲಸೆ ಕಾರ್ಮಿಕರ ನಡುವೆ ಉಚಿತವಾಗಿ ವಿತರಿಸಲು ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಹಂಚಿಕೆ ಮಾಡುವಂತೆ ನ್ಯಾಯಪೀಠ ಕೇಂದ್ರಕ್ಕೆ ಸೂಚಿಸಿದೆ. ಸುಪ್ರೀಂ ಕೋರ್ಟ್, ರಾಷ್ಟ್ರೀಯ ಮಾಹಿತಿ ಕೇಂದ್ರದ ಸಹಾಯದಿಂದ ಜುಲೈ 31 ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸ್ಪಷ್ಟವಾಗಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT