ಟ್ವಿಟರ್ ಇಂಡಿಯಾದ ಮುಖ್ಯಸ್ಥ 
ದೇಶ

ಭಾರತದ ಭೂಪಟ ವಿರೂಪಗೊಳಿಸಿದ ಟ್ವಿಟರ್ ಸಂಸ್ಥೆ ಮುಖ್ಯಸ್ಥರ ವಿರುದ್ಧ ಯುಪಿ ಪೊಲೀಸರಿಂದ ಮತ್ತೊಂದು ಎಫ್ಐಆರ್!

ಭಾರತದ ಭೂಪಟವನ್ನು ವಿರೂಪಗೊಳಿಸಿ ಪ್ರಕಟಿಸಿದ್ದ ಟ್ವಿಟರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಮತ್ತೊಂದು ಎಫ್ಐಆರ್ ನ್ನು ದಾಖಲಿಸಿದ್ದಾರೆ. 

ಲಖನೌ: ಭಾರತದ ಭೂಪಟವನ್ನು ವಿರೂಪಗೊಳಿಸಿ ಪ್ರಕಟಿಸಿದ್ದ ಟ್ವಿಟರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಮತ್ತೊಂದು ಎಫ್ಐಆರ್ ನ್ನು ದಾಖಲಿಸಿದ್ದಾರೆ. 

ಟ್ವಿಟರ್ ಇಂಡಿಯಾದ ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ಬಜರಂಗದಳ ಪದಾಧಿಕಾರಿಯೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ಖುರ್ಜಾ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಟ್ವಿಟರ್ ನಲ್ಲಿ ಪ್ರಕಟಗೊಂಡಿದ್ದ ಭೂಪಟದಲ್ಲಿ ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್, ಜಮ್ಮು-ಕಾಶ್ಮೀರಗಳನ್ನು ಭಾರತದ ಹೊರ ಭಾಗದಲ್ಲಿ ಚಿತ್ರೀಕರಿಸಲಾಗಿತ್ತು. ಈ ಪ್ರಮಾದ ಸೋಮವಾರ (ಜೂ.28 ರಂದು) ಬೆಳಕಿಗೆ ಬಂದಿದ್ದು, ನೆಟಿಜನ್ ಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. 

ಆಕ್ಷೇಪ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತ ಟ್ವಿಟರ್ ಸಂಜೆಯ ವೇಳೆಗೆ ಭೂಪಟವನ್ನು ತೆಗೆದುಹಾಕಿತ್ತು. "ವಿಶ್ವಭೂಪಟದಲ್ಲಿ ಲಡಾಖ್, ಜಮ್ಮು-ಕಾಶ್ಮೀರಗಳನ್ನು ಭಾರತದ ಒಳಗೆ ಚಿತ್ರೀಕರಿಸಲಾಗಿಲ್ಲ. ಇದು ಕಾಕತಾಳೀಯವಲ್ಲ. ಈ ನಡೆಯಿಂದ ಭಾರತೀಯರಿಗೆ ತೀವ್ರವಾದ ನೋವುಂಟಾಗಿದೆ ಎಂದು ಪಶ್ಚಿಮ ಉತ್ತರ ಪ್ರದೇಶದ ಬಜರಂಗದಳದ ಸಂಚಾಲಕ ಪ್ರವೀಣ್ ಭಾಟಿ ಹೇಳಿದ್ದಾರೆ. 

ಎಫ್ಐಆರ್ ನಲ್ಲಿ ಟ್ವಿಟರ್ ಇಂಡಿಯಾದ ಎಂಡಿ ಮನೀಷ್ ಮಹೇಶ್ವರಿ ಹಾಗೂ ನ್ಯೂಸ್ ಪಾರ್ಟ್ನರ್ಶಿಪ್ಸ್ ನ ಮುಖ್ಯಸ್ಥರಾದ ಅಮೃತಾ ತ್ರಿಪಾಠಿ ಅವರ ಹೆಸರನ್ನು ಉಲ್ಲೇಖಿಸಲಾಗಿದ್ದು, ಐಪಿಸಿ ಸೆಕ್ಷನ್ 505 (2) (ಸಾರ್ವಜನಿಕ ಕಿಡಿಗೇಡಿತನ)ದ ಆರೋಪದ ಅಡಿ ಪ್ರಕರಣ ದಾಖಲಿಸಲಾಗಿದೆ. 

ಐಟಿ ಕಾಯ್ದೆಯ ಸೆಕ್ಷನ್ 74 (ಮೋಸದ ಉದ್ದೇಶಕ್ಕಾಗಿ ಪ್ರಕಟಣೆ) ಆರೋಪದ ಅಡಿಯೂ ಪ್ರಕರಣ ದಾಖಲಾಗಿದೆ. ಟ್ವಿಟರ್ ನ ವೆಬ್ ಸೈಟ್ ನ ವೃತ್ತಿ ವಿಭಾಗದಲ್ಲಿ ಈ ಭೂಪಟ ಪ್ರಕಟವಾಗಿದ್ದು, ಟ್ವೀಪ್ ಲೈಫ್ ಎಂಬ ಶೀರ್ಷಿಕೆಯಲ್ಲಿದೆ. ಇದಕ್ಕೂ ಮುನ್ನ ಲೇಹ್ ಭಾಗವನ್ನು ಚೀನಾದ್ದೆಂದು ತೋರಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT