ಬಿಪಿನ್ ರಾವತ್ 
ದೇಶ

ಭದ್ರತಾ ಪಡೆಗಳ ಮುಖ್ಯಸ್ಥರಿಂದ ವಾಸ್ತವ ಗಡಿ ನಿಯಂತ್ರಣ ರೇಖೆಯ ಮುನ್ನೆಲೆ ಪ್ರದೇಶಗಳಲ್ಲಿ ಸನ್ನದ್ಧತೆ ಪರಿಶೀಲನೆ

ರಕ್ಷಣಾ ಪಡೆಗಳ (ಸಿಡಿಎಸ್ ) ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಿಮಾಚಲ ಪ್ರದೇಶದ ಕೇಂದ್ರೀಯ ವಲಯದ ವಾಸ್ತವ ಗಡಿ ನಿಯಂತ್ರಣಾ ರೇಖೆಯಲ್ಲಿ ಸೇನೆಯ ಸನ್ನದ್ಧತೆಯನ್ನು ಪರಿಶೀಲಿಸಿದರು.

ನವದೆಹಲಿ: ರಕ್ಷಣಾ ಪಡೆಗಳ (ಸಿಡಿಎಸ್ ) ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಿಮಾಚಲ ಪ್ರದೇಶದ ಕೇಂದ್ರೀಯ ವಲಯದ ವಾಸ್ತವ ಗಡಿ ನಿಯಂತ್ರಣಾ ರೇಖೆಯಲ್ಲಿ ಸೇನೆಯ ಸನ್ನದ್ಧತೆಯನ್ನು ಪರಿಶೀಲಿಸಿದರು.

ಗಡಿಯ ಪ್ರಮುಖ ಸುಮ್ ದೋಹ್ ಉಪ ವಲಯಕ್ಕೆ ಭೇಟಿ ನೀಡಿದ ಜನರಲ್ ಬಿಪಿನ್ ರಾವತ್ ಅವರಿಗೆ ಸೇನೆಯ ಕಾರ್ಯಾಚರಣೆ ಸನ್ನದ್ಧತೆ ಮತ್ತು ರಾಷ್ಟ್ರ ಸಮಗ್ರತೆ ಕಾಪಾಡುವ ಸೇನಾ ಪಡೆಗಳ ಕಾರ್ಯಗಳ ಬಗ್ಗೆ ವಿವರಿಸಲಾಯಿತು.

 ಪ್ರತಿಕೂಲ ಹವಾಮಾನದ ಅತಿದೂರದಲ್ಲಿ ನಿಯೋಜಿಸಲಾಗಿರುವ ಸೇನೆ, ಐಟಿಪಿಬಿ ಮತ್ತು ಜನರಲ್ ರಿಸರ್ವ್ ಇಂಜಿನಿಯರಿಂಗ್ ಫೋರ್ಸ್ ಸಿಬ್ಬಂದಿಯೊಂದಿಗೆ ಭದ್ರತಾ ಪಡೆಗಳ ಮುಖ್ಯಸ್ಥರು ಸಂವಾದ ನಡೆಸಿದರು. 

ಸೇನಾ ಪಡೆಗಳ ಸರ್ವೋಚ್ಛ ನೈತಿಕತೆಯನ್ನು ಬಿಪಿನ್ ರಾವತ್ ಈ ವೇಳೆ ಪ್ರಶಂಸಿಸಿದರು. ಕಟ್ಟೆಚ್ಚರಿಂದ ಇರುವಂತೆ ಎಲ್ಲ ಶ್ರೇಣಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಉತ್ತೇಜಿಸಿದ ರಾವತ್, ಸೇನಾ ಪಡೆಗಳ ವೃತ್ತಿಪರತೆಯನ್ನು ಕೊಂಡಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT