ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆ 
ದೇಶ

ಗ್ರೀನ್ ಪಾಸ್ ಯೋಜನೆಯಡಿ ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆ ಪಡೆದವರನ್ನು ಪರಿಗಣಿಸಿ: ಇಯು ರಾಷ್ಟ್ರಗಳಿಗೆ ಭಾರತದ ಮನವಿ

ಯುರೋಪಿಯನ್ ಒಕ್ಕೂಟವು ತನ್ನ 'ಗ್ರೀನ್ ಪಾಸ್' ಯೋಜನೆಯಡಿ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದರಿಂದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳನ್ನು ತೆಗೆದುಕೊಂಡು ಯುರೋಪ್ ಗೆ ತೆರಳಲು ಬಯಸುವ ಭಾರತೀಯರಿಗೆ ಅವಕಾಶ ನೀಡುವುದನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ  ಭಾರತ 27 ರಾಷ್ಟ್ರಗಳ ಗುಂಪಿನ ಸದಸ್ಯರನ್ನು ಕೇಳಿದೆ.

ನವದೆಹಲಿ: ಯುರೋಪಿಯನ್ ಒಕ್ಕೂಟವು ತನ್ನ 'ಗ್ರೀನ್ ಪಾಸ್' ಯೋಜನೆಯಡಿ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದರಿಂದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳನ್ನು ತೆಗೆದುಕೊಂಡು ಯುರೋಪ್ ಗೆ ತೆರಳಲು ಬಯಸುವ ಭಾರತೀಯರಿಗೆ ಅವಕಾಶ ನೀಡುವುದನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ  ಭಾರತ 27 ರಾಷ್ಟ್ರಗಳ ಗುಂಪಿನ ಸದಸ್ಯರನ್ನು ಕೇಳಿದೆ.

ಕೋವಿನ್ ಪೋರ್ಟಲ್ ಮೂಲಕ ನೀಡಲಾದ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸ್ವೀಕರಿಸುವಂತೆ ಭಾರತವು ಇಯು ಸದಸ್ಯ ರಾಷ್ಟ್ರಗಳಿಗೆ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಕೋವಿಡ್-19  ಸಾಂಕ್ರಾಮಿಕ ಸಮಯದಲ್ಲಿ ಮುಕ್ತ ಸಂಚಾರಕ್ಕೆ ಅನುಕೂಲವಾಗುವ ಉದ್ದೇಶದಿಂದ ಯುರೋಪಿಯನ್ ಯೂನಿಯನ್‌ನ ಡಿಜಿಟಲ್ ಕೋವಿಡ್ ಪ್ರಮಾಣಪತ್ರ ಅಥವಾ ಗ್ರೀನ್ ಪಾಸ್  ಗುರುವಾರದಿಂದ ಜಾರಿಗೆ ಬರಲಿದೆ.

ಇದರಡಿ  ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ (ಇಎಂಎ) ನಿಂದ ಅಧಿಕೃತ ಲಸಿಕೆಗಳನ್ನು ತೆಗೆದುಕೊಂಡ ವ್ಯಕ್ತಿಗಳಿಗೆ ಯುರೋಪಿಯನ್ ಪ್ರದೇಶದೊಳಗೆ ಪ್ರವಾಸ ಪ್ರಯಾಣ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗುತ್ತದೆ.  ವೈಯಕ್ತಿಕ ಸದಸ್ಯ ರಾಷ್ಟ್ರಗಳು ರಾಷ್ಟ್ರೀಯ ಮಟ್ಟದಲ್ಲಿ ಅಥವಾ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಿಂದ ಗುರುತಿಸಲ್ಪಟ್ಟ ಲಸಿಕೆಗಳನ್ನು ಸಹ ಸ್ವೀಕರಿಸುವ ನಮ್ಯತೆಯನ್ನು ಹೊಂದಿವೆ.

ಭಾರತದಲ್ಲಿ ಕೋವಿಡ್-19 ಲಸಿಕೆಗಳನ್ನು ತೆಗೆದುಕೊಂಡ ವ್ಯಕ್ತಿಗಳಿಗೆ, ಅಂದರೆ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್, ಮತ್ತು ಕೋವಿನ್ ಪೋರ್ಟಲ್ ಮೂಲಕ ನೀಡಲಾದ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಸ್ವೀಕರಿಸುವ ವ್ಯಕ್ತಿಗಳಿಗೆ ಇದೇ ರೀತಿಯ ವಿನಾಯಿತಿ ನೀಡುವುದನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ಇಯು ಸದಸ್ಯ ರಾಷ್ಟ್ರಗಳಿಗೆ ವಿನಂತಿ ಮಾಡಿಕೊಂಡಿರುವುದಾಗಿ ಮೂಲವೊಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!