ಅಧೀರ್ ರಂಜನ್ ಚೌಧರಿ 
ದೇಶ

ಜನರಿಂದ ಸಹಾನುಭೂತಿ ಪಡೆಯಲು ಮಮತಾ ಪ್ರಯತ್ನ: ಅಧೀರ್ ರಂಜನ್ ಚೌಧರಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಮೇಲೆ ಕೊಲೆ ಯತ್ನ, ಪಿತೂರಿ, ಹಲ್ಲೆಯಂತಹ ಘಟನೆಗಳು ನಡೆದಿವೆ ಎಂದು ಹೇಳುವ ಮೂಲಕ ಜನರಿಂದ ಸಹಾನುಭೂತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಮೇಲೆ ಕೊಲೆ ಯತ್ನ, ಪಿತೂರಿ, ಹಲ್ಲೆಯಂತಹ ಘಟನೆಗಳು ನಡೆದಿವೆ ಎಂದು ಹೇಳುವ ಮೂಲಕ ಜನರಿಂದ ಸಹಾನುಭೂತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ತನ್ನೊಂದಿಗೆ ಪೊಲೀಸರು ಇರಲಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳುವುದು ಹಾಸ್ಯಾಸ್ಪದವಾಗಿದೆ. ಇದು  ನೆಪಗಳೊಂದಿಗೆ ಚುನಾವಣೆ ಗೆಲ್ಲುವ ತಂತ್ರವಾಗಿದೆ ಎಂದು ಅವರು ಹೇಳಿದ್ದಾರೆ.

ಒಂದು ವೇಳೆ ಪಿತೂರಿ ನಡೆದಿದ್ದರೆ ಸಿಬಿಐ, ಎನ್ ಐಎ, ಸಿಐಡಿಗೆ ಕರೆ ಮಾಡಬೇಕಿತ್ತು ಅಥವಾ ಎಸ್ ಐಟಿ ರಚಿಸಬೇಕಿತ್ತು. ಮಮತಾ ಬ್ಯಾನರ್ಜಿ ಏಕೆ ಇದನ್ನು ಮಾಡಲಿಲ್ಲ? ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ಚೌಧರಿ, ನೆಪಗಳೊಂದಿಗೆ ಸಾರ್ವಜನಿಕರಿಂದ ಸಹಾನುಭೂತಿಯನ್ನು ಪಡೆಯಲು ಬಯಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT