ಏಮ್ಸ್ ನಿರ್ದೇಶಕ ಡಾ ಗುಲೇರಿಯಾ 
ದೇಶ

ಕೊರೋನಾ ಸಾಂಕ್ರಾಮಿಕ 2ನೇ ಅಲೆ ತಡೆಯಲು ಆಕ್ರಮಣಕಾರಿ ಲಾಕ್ ಡೌನ್ ಅತ್ಯಗತ್ಯ; ಏಮ್ಸ್ ಮುಖ್ಯಸ್ಥ ಗುಲೇರಿಯಾ

ಕೊರೋನಾ ಸಾಂಕ್ರಾಮಿಕ 2ನೇ ಅಲೆಯನ್ನು ತಡೆಗಟ್ಟಲು ಕಳೆದ ವರ್ಷ ಮಾರ್ಚ್ ನಲ್ಲಿ ವಿಧಿಸಲಾಗಿದ್ದ ಮಾದರಿಯಲ್ಲೇ ಆಕ್ರಮಣಕಾರಿ ಲಾಕ್ಡೌನ್ ಜಾರಿ ಮಾಡಬೇಕು ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ನವದೆಹಲಿ: ಕೊರೋನಾ ಸಾಂಕ್ರಾಮಿಕ 2ನೇ ಅಲೆಯನ್ನು ತಡೆಗಟ್ಟಲು ಕಳೆದ ವರ್ಷ ಮಾರ್ಚ್ ನಲ್ಲಿ ವಿಧಿಸಲಾಗಿದ್ದ ಮಾದರಿಯಲ್ಲೇ ಆಕ್ರಮಣಕಾರಿ ಲಾಕ್ಡೌನ್ ಜಾರಿ ಮಾಡಬೇಕು ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ದೇಶಾದ್ಯಂತ ಮಾರಕ ಕೊರೋನಾ ವೈರಸ್ ಅಬ್ಬರ ಜೋರಾಗಿದ್ದು, ಇಂದು ದಾಖಲೆಯ 4 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿದೆ. ಅಂತೆಯೇ ದೇಶಾದ್ಯಂತ ಆಸ್ಪತ್ರೆಯಲ್ಲಿ ಬೆಡ್ ಗಳಿಗಾಗಿ ಮತ್ತು ಆಕ್ಸಿಜನ್ ಸಿಲಿಂಡರ್ ಗಳಿಗಾಗಿ ರೋಗಿಗಳಉ ಪರದಾಡುತ್ತಿದ್ದಾರೆ. ಇತ್ತ ಮೃತ ಸೋಂಕಿತರ ಅಂತ್ಯ  ಸಂಸ್ಕಾರಕ್ಕಾಗಿ ಚಿತಾಗಾರಗಳ ಮುಂದೆಯೂ ಮೃತರ ಕುಟುಂಬಸ್ಥರು ಮತ್ತು ಆ್ಯಂಬುಲೆನ್ಸ್ ಗಳು ಸರತಿ ಸಾಲಲ್ಲಿ ನಿಲ್ಲುತ್ತಿರುವುದು ದೇಶದ ಧಾರುಣ ಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಇದರ ನಡುವೆಯೇ ಕೊರೋನಾ ಸಾಂಕ್ರಾಮಿಕ 2ನೇ ಅಲೆಯನ್ನು ತಡೆಗಟ್ಟಲು ಕಳೆದ ವರ್ಷ ಮಾರ್ಚ್ ನಲ್ಲಿ ವಿಧಿಸಲಾಗಿದ್ದ ಮಾದರಿಯಲ್ಲೇ ಆಕ್ರಮಣಕಾರಿ ಲಾಕ್ಡೌನ್ ಜಾರಿ ಮಾಡಬೇಕು ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  'ಭಾರತದ ಆರೋಗ್ಯ ಮೂಲಸೌಕರ್ಯಕ್ಕೆ ಮಿತಿ ಇದೆ, ಹಾಗಾಗಿ ಎರಡನೇ ಕೊರೋನಾ ಅಲೆಯನ್ನು ತಡೆಗಟ್ಟಲು ಕಳೆದ ವರ್ಷ ಮಾರ್ಚ್ ನಲ್ಲಿ ವಿಧಿಸಿದ ಲಾಕ್ ಡೌನ್ ನಂತೆ ಈ ಬಾರಿಯೂ ಆಕ್ರಮಣಕಾರಿ ಲಾಕ್ಡೌನ್ ವಿಧಿಸಬೇಕು. ಉತ್ತರ ಪ್ರದೇಶ, ಮಹಾರಾಷ್ಟ್ರ, ಹರಿಯಾಣ ಮತ್ತು ಇತರ ರಾಜ್ಯಗಳು  ಜಾರಿಗೊಳಿಸಿದ ರಾತ್ರಿ ಕರ್ಫ್ಯೂಗಳು ಮತ್ತು ವಾರಾಂತ್ಯದ ಲಾಕ್ಡೌನ್ಗಳು ಪರಿಣಾಮಕಾರಿಯಲ್ಲವೆಂದು ಸಾಬೀತಾಗಿದೆ. ಇಲ್ಲಿನ ದೈನಂದಿನ ಸೋಂಕು ಪ್ರಕರಣಗಳ ವರದಿಯಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಂತೆಯೇ ಹೆಚ್ಚಿನ ಸೋಂಕು ಪ್ರಕರಣಗಳಿರುವ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಲಾಕ್ಡೌನ್ ಗಳನ್ನು ಜಾರಿಗೆ ತರಬೇಕು. ಹೆಚ್ಚಾಗುತ್ತಿರುವ ಸೋಂಕು ಪ್ರಮಾಣವನ್ನು ತಗ್ಗಿಸಲು ನಾವು ಆಕ್ರಮಣಕಾರಿಯಾಗಿ ಕೆಲಸ ಮಾಡಬೇಕಾಗಿದೆ. ವಿಶ್ವದ ಯಾವುದೇ ಆರೋಗ್ಯ ವ್ಯವಸ್ಥೆಯು ಈ ರೀತಿಯ ಹೊರೆಗಳನ್ನು ನಿರ್ವಹಿಸಲು  ಸಾಧ್ಯವಿಲ್ಲ. ಆಕ್ರಮಣಕಾರಿ ಲಾಕ್ಡೌನ್ ಅಥವಾ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಗೀತೆ ಪಠಿಸಿದ ಡಿ.ಕೆ ಶಿವಕುಮಾರ್: ನಮಗೆ ಹೈಕಮಾಂಡ್ ಇದೆ, ನಾನು ಪ್ರತಿಕ್ರಿಯಿಸುವುದಿಲ್ಲ; ಜಿ ಪರಮೇಶ್ವರ

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT