ಕೆ. ರತ್ನಪ್ರಭಾ 
ದೇಶ

ತಿರುಪತಿ ಲೋಕಸಭಾ ಉಪ ಚುನಾವಣೆ: ಮಾಜಿ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೋಲು

ಆಂಧ್ರ ಪ್ರದೇಶದ ತಿರುಪತಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕನ್ನಡತಿ, ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರು ಪರಾಭವಗೊಂಡಿದ್ದಾರೆ.

ತಿರುಪತಿ: ಆಂಧ್ರ ಪ್ರದೇಶದ ತಿರುಪತಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕನ್ನಡತಿ, ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರು ಪರಾಭವಗೊಂಡಿದ್ದಾರೆ.

ಇಂದು ಪ್ರಕಟವಾದ ತಿರುಪತಿ ಲೋಕಸಭಾ ಉಪಚುನಾವಣಾ ಫಲಿತಾಂಶದಲ್ಲಿ ರತ್ನ ಪ್ರಭಾ ಅವರು, ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ ಗುರುಮೂರ್ತಿ ಅವರ ವಿರುದ್ಧ ಸೋಲು ಕಂಡಿದ್ದಾರೆ. ತಿರುಪತಿ ಎಸ್‌ಸಿ ಮೀಸಲು ಲೋಕಸಭಾ ಕ್ಷೇತ್ರವಾಗಿದ್ದು, ಇಲ್ಲಿ ಎಂ ಗುರುಮೂರ್ತಿ ಅವರು ಟಿಡಿಪಿಯ ಪಣಬಾಕ  ಲಕ್ಷ್ಮೀ ಅವರನ್ನು ಮಣಿಸಿ 2.70 ಲಕ್ಷ ದಾಖಲೆಯ ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಪಟ್ಟಿಯಲ್ಲಿ ಬಿಜೆಪಿ ಮತ್ತು ಜನಸೇನಾ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿದ್ದ ರತ್ನ ಪ್ರಭಾ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಒಟ್ಟು ಚಲಾವಣೆಗೊಂಡ ಮತಗಳಲ್ಲಿ ಕೆ.ರತ್ನಪ್ರಭಾ ಅವರು ಶೇ 5.9 ರಷ್ಟು ಮತಗಳನ್ನು  ಪಡೆಯುವ ಮೂಲಕ ಮೂರನೇ ಸ್ಥಾನ ಗಳಿಸಿದ್ದಾರೆ. 

ಇನ್ನು ಆಂಧ್ರಪ್ರದೇಶದಲ್ಲಿ ಆಡಳಿತಾರೂಡ ವೈಎಸ್‌ಆರ್ ಕಾಂಗ್ರೆಸ್ ತಿರುಪತಿ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಈ ಕ್ಷೇತ್ರದ ಸಂಸದರಾಗಿದ್ದ ಬಲ್ಲಿ ದುರ್ಗಾ ಪ್ರಸಾದ್ ರಾವ್ ಅವರು ಕಳೆದ ವರ್ಷ ಕರೊನಾದಿಂದ ಮೃತಪಟ್ಟಿದ್ದರಿಂದ ತೆರವಾಗಿತ್ತು. ಏಪ್ರಿಲ್ 17 ರಂದು ಇಲ್ಲಿ ಮತದಾನ ನಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

SCROLL FOR NEXT