ಯಶ್ವಂತ್ ಸಿನ್ಹಾ 
ದೇಶ

ಬಂಗಾಳದ ಫಲಿತಾಂಶ ಉತ್ತರ ಪ್ರದೇಶ ವಿಧಾನಸಭೆ, 2024ರ ಸಾರ್ವತ್ರಿಕ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ: ಯಶ್ವಂತ್ ಸಿನ್ಹಾ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶ್ವಂತ್ ಸಿನ್ಹಾ ಭಾನುವಾರ ಒತ್ತಾಯಿಸಿದ್ದಾರೆ.

ಹಜಾರಿಭಾಗ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶ್ವಂತ್ ಸಿನ್ಹಾ ಭಾನುವಾರ ಒತ್ತಾಯಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಸಹ ರಾಜೀನಾಮೆ ನೀಡಬೇಕೆಂದು  ಸಿನ್ಹಾ ಒತ್ತಾಯಿಸಿದರು.

ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶವು ಉತ್ತರ ಪ್ರದೇಶ ವಿಧಾನಸಭೆ ಮತ್ತು 2024 ರ ಸಂಸತ್ ಚುನಾವಣೆಯ ಮೇಲೆ ಬಹುದೊಡ್ಡ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. ದೇಶದ ಜನರು ಕೇಂದ್ರ ನಾಯಕತ್ವದ ಬದಲಾವಣೆ ಬಯಸುತ್ತಾರೆ "ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು" ಎಂದು ಅಟಲ್ ಬಿಹಾರಿ ವಾಜಪೇಯಿ ಸಂಪುಟ ಸದಸ್ಯರಾಗಿದ್ದ ಸಿನ್ಹಾ ಸುದ್ದಿಗಾರರಿಗೆ ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ  ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಅದ್ಭುತ ಗೆಲುವು ಸಾಧಿಸಿದೆ.  ಈ ಮೂಲಕ ಮೋದಿ ಮತ್ತು ಇತರ ಉನ್ನತ ಬಿಜೆಪಿ ನಾಯಕರ ಗೆಲುವಿನ ಕಸನು ಚೂರಾಗಿದೆ ಎಂದು ಬಿಜೆಪಿ ತ್ಯಜಿಸಿದ ಸಿನ್ಹಾಹೇಳಿದ್ದಾರೆ. ಅಲ್ಲದೆ ಬಿಜೆಪಿ ನಾಯಕರು ಜಾರ್ಖಂಡ್ ಮತ್ತು ಪಕ್ಕದ ರಾಜ್ಯಗಳಿಂದ ಜನರನ್ನು ಕರೆತಂದು ರಾಜ್ಯದಲ್ಲಿ ಸಾಮೂಹಿಕ ಬೆಂಬಲವನ್ನು ಪಡೆದಿದ್ದಾರೆ ಎಂದು ಅವರು ಆರೋಪಿಸಿದರು. ತಮ್ಮ ಪ್ರಚಾರದ ಸಮಯದಲ್ಲಿ ಪಶ್ಚಿಮ ಬಂಗಾಳದ ಜನರ ಮುಂದೆ ಬ್ಯಾನರ್ಜಿ ಅವರನ್ನು ಅವಮಾನಿಸಿದ್ದಕ್ಕಾಗಿ ಅವರು ಕೇಸರಿ ಪಕ್ಷದ ಮುಖಂಡರಿಗೆ ತಿರುಗೇಟು ನೀಡಿದ್ದರು,

ಇದು ಕೋಟ್ಯಂತರ ಬಂಗಾಳಿಗಳ ಭಾವನೆಗಳನ್ನು ನೋಯಿಸಿದೆ.ಜನರು ಮೋದಿ ಮತ್ತು ಷಾ ಇಬ್ಬರಿಗೂ ಸೂಕ್ತವಾದ ಉತ್ತರವನ್ನು ನೀಡಿದ್ದಾರೆ. ಟಿಎಂಸಿಗೆ ಮತ ಚಲಾಯಿಸುವ ಮೂಲಕ ಅವರು ಬ್ಯಾನರ್ಜಿಯೊಂದಿಗೆ ಒಗ್ಗಟ್ಟಾಗಿ ನಿಂತಿದ್ದಾರೆ ಎಂದು ಸಿನ್ಹಾ ಹೇಳಿದರು. ಚುನಾವಣಾ ಫಲಿತಾಂಶವು ಬ್ಯಾನರ್ಜಿಯವರ ಕೆಲಸ ಮತ್ತು ಅವರ ಆಡಳಿತದಲ್ಲಿ ರಾಜ್ಯದ ಅಭಿವೃದ್ಧಿಯಿಂದ ಜನರು ತೃಪ್ತರಾಗಿದ್ದಾರೆ ಎಂಬ ಸೂಚನೆಯಾಗಿದೆ. 'ಅಸೋಲ್ ಪೊರಿಬೋರ್ತಿನ್  ಎಂಬ ಬಿಜೆಪಿ ನಾಯಕರ ಹೇಳಿಕೆಯು ಜನರನ್ನು ಮನವೊಲಿಸುವಲ್ಲಿ ವಿಫಲವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT