ಮಮತಾ-ಸುವೇಂದು 
ದೇಶ

ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ

ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಕೋಲ್ಕತ್ತಾ: ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಮೊದಲಿಗೆ ಮಾಧ್ಯಮಗಳಲ್ಲಿ ಮಮತಾ ಬ್ಯಾನರ್ಜಿ ಅವರು 1200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಆಯೋಗ ಅಂತಿಮ ಫಲಿತಾಂಶ ಘೋಷಿಸಿದ್ದು ಈ ಮೂಲಕ ಮಮತಾ ಬ್ಯಾನರ್ಜಿ ಅವರು 1927 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. 

ನಂದಿಗ್ರಾಮ ಸೋಲಿನ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ ಅವರು, ನಾನು ಜನರ ತೀರ್ಪಿಗೆ ತಲೆ ಬಾಗುತ್ತೇನೆ. ನಂದಿಗ್ರಾಮದಲ್ಲಿ ನನ್ನ ಸೋಲನ್ನು ಒಪ್ಪಿಕೊಳ್ಳುತ್ತೇನೆ. ಮೊದಲಿಗೆ ಚುನಾವಣಾ ಆಯೋಗ ನಾನು ಗೆದ್ದಿರುವುದಾಗಿ ಹೇಳಿತ್ತು. ಆದರೆ ಇದೀಗ 1927 ಮತಗಳ ಅಂತರದಿಂದ ಸೋತಿರುವುದಾಗಿ ಘೋಷಿಸಿದೆ. ಈ ಸಂಬಂಧ ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ ಎಂದರು.

ಇನ್ನು ಬಂಗಾಳದಲ್ಲಿ ಟಿಎಂಸಿ ಅಭೂತಪೂರ್ವ ಸಾಧನೆ ಮಾಡಿದ್ದು 221 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಸೋಲು ಕಂಡಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT