ಮಮತಾ-ಸುವೇಂದು 
ದೇಶ

ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ

ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಕೋಲ್ಕತ್ತಾ: ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಮೊದಲಿಗೆ ಮಾಧ್ಯಮಗಳಲ್ಲಿ ಮಮತಾ ಬ್ಯಾನರ್ಜಿ ಅವರು 1200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಆಯೋಗ ಅಂತಿಮ ಫಲಿತಾಂಶ ಘೋಷಿಸಿದ್ದು ಈ ಮೂಲಕ ಮಮತಾ ಬ್ಯಾನರ್ಜಿ ಅವರು 1927 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. 

ನಂದಿಗ್ರಾಮ ಸೋಲಿನ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ ಅವರು, ನಾನು ಜನರ ತೀರ್ಪಿಗೆ ತಲೆ ಬಾಗುತ್ತೇನೆ. ನಂದಿಗ್ರಾಮದಲ್ಲಿ ನನ್ನ ಸೋಲನ್ನು ಒಪ್ಪಿಕೊಳ್ಳುತ್ತೇನೆ. ಮೊದಲಿಗೆ ಚುನಾವಣಾ ಆಯೋಗ ನಾನು ಗೆದ್ದಿರುವುದಾಗಿ ಹೇಳಿತ್ತು. ಆದರೆ ಇದೀಗ 1927 ಮತಗಳ ಅಂತರದಿಂದ ಸೋತಿರುವುದಾಗಿ ಘೋಷಿಸಿದೆ. ಈ ಸಂಬಂಧ ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ ಎಂದರು.

ಇನ್ನು ಬಂಗಾಳದಲ್ಲಿ ಟಿಎಂಸಿ ಅಭೂತಪೂರ್ವ ಸಾಧನೆ ಮಾಡಿದ್ದು 221 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಸೋಲು ಕಂಡಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?