ಮಮತಾ-ಸುವೇಂದು 
ದೇಶ

ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ

ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಕೋಲ್ಕತ್ತಾ: ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಮೊದಲಿಗೆ ಮಾಧ್ಯಮಗಳಲ್ಲಿ ಮಮತಾ ಬ್ಯಾನರ್ಜಿ ಅವರು 1200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಆಯೋಗ ಅಂತಿಮ ಫಲಿತಾಂಶ ಘೋಷಿಸಿದ್ದು ಈ ಮೂಲಕ ಮಮತಾ ಬ್ಯಾನರ್ಜಿ ಅವರು 1927 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. 

ನಂದಿಗ್ರಾಮ ಸೋಲಿನ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ ಅವರು, ನಾನು ಜನರ ತೀರ್ಪಿಗೆ ತಲೆ ಬಾಗುತ್ತೇನೆ. ನಂದಿಗ್ರಾಮದಲ್ಲಿ ನನ್ನ ಸೋಲನ್ನು ಒಪ್ಪಿಕೊಳ್ಳುತ್ತೇನೆ. ಮೊದಲಿಗೆ ಚುನಾವಣಾ ಆಯೋಗ ನಾನು ಗೆದ್ದಿರುವುದಾಗಿ ಹೇಳಿತ್ತು. ಆದರೆ ಇದೀಗ 1927 ಮತಗಳ ಅಂತರದಿಂದ ಸೋತಿರುವುದಾಗಿ ಘೋಷಿಸಿದೆ. ಈ ಸಂಬಂಧ ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ ಎಂದರು.

ಇನ್ನು ಬಂಗಾಳದಲ್ಲಿ ಟಿಎಂಸಿ ಅಭೂತಪೂರ್ವ ಸಾಧನೆ ಮಾಡಿದ್ದು 221 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಸೋಲು ಕಂಡಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT