ಮಮತಾ-ಸುವೇಂದು 
ದೇಶ

ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ

ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಕೋಲ್ಕತ್ತಾ: ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

ಮೊದಲಿಗೆ ಮಾಧ್ಯಮಗಳಲ್ಲಿ ಮಮತಾ ಬ್ಯಾನರ್ಜಿ ಅವರು 1200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಆಯೋಗ ಅಂತಿಮ ಫಲಿತಾಂಶ ಘೋಷಿಸಿದ್ದು ಈ ಮೂಲಕ ಮಮತಾ ಬ್ಯಾನರ್ಜಿ ಅವರು 1927 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. 

ನಂದಿಗ್ರಾಮ ಸೋಲಿನ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ ಅವರು, ನಾನು ಜನರ ತೀರ್ಪಿಗೆ ತಲೆ ಬಾಗುತ್ತೇನೆ. ನಂದಿಗ್ರಾಮದಲ್ಲಿ ನನ್ನ ಸೋಲನ್ನು ಒಪ್ಪಿಕೊಳ್ಳುತ್ತೇನೆ. ಮೊದಲಿಗೆ ಚುನಾವಣಾ ಆಯೋಗ ನಾನು ಗೆದ್ದಿರುವುದಾಗಿ ಹೇಳಿತ್ತು. ಆದರೆ ಇದೀಗ 1927 ಮತಗಳ ಅಂತರದಿಂದ ಸೋತಿರುವುದಾಗಿ ಘೋಷಿಸಿದೆ. ಈ ಸಂಬಂಧ ನಾನು ನ್ಯಾಯಾಲಯದ ಮೊರೆ ಹೋಗುತ್ತೇನೆ ಎಂದರು.

ಇನ್ನು ಬಂಗಾಳದಲ್ಲಿ ಟಿಎಂಸಿ ಅಭೂತಪೂರ್ವ ಸಾಧನೆ ಮಾಡಿದ್ದು 221 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಸೋಲು ಕಂಡಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT