ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ 
ದೇಶ

ಒಡಿಶಾದಲ್ಲಿ ಪತ್ರಕರ್ತರು ಮುಂಚೂಣಿ ಕೋವಿಡ್ ಸೇನಾನಿಗಳಾಗಿ ಘೋಷಣೆ

ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.

ಭುವನೇಶ್ವರ: ಮಹತ್ವದ ತೀರ್ಮಾನವೊಂದರಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿ ಕೋವಿಡ್ ಸೇನಾನಿಗಳೆಂದು ಘೋಷಿಸಿದ್ದಾರೆ.

ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಅನುಮೋದಿಸಿರುವ ನವೀನ್‍ ಪಟ್ನಾಯಕ್, ಕಾರ್ಯನಿರತ ಪತ್ರಕರ್ತರು  ಅಪಾರ ಸುದ್ದಿಗಳನ್ನು ನೀಡುವ ಮೂಲಕ ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ.ಈ ಮೂಲಕ ಬಿಕ್ಕಟ್ಟಿನ ಸಂದರ್ಭದಲ್ಲಿ  ಕೋವಿಡ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.  ಕೋವಿಡ್ ವಿರುದ್ಧದ ಸರ್ಕಾರದ ಹೋರಾಟಕ್ಕೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. 

 ಮುಖ್ಯಮಂತ್ರಿಯವರ ಈ ನಿರ್ಧಾರದಿಂದ ಗೋಪಬಂಧು ಸಾಂಬದಿಕ ಸ್ವಾಸ್ಥ್ಯ ಭೀಮಾ ಯೋಜನೆ ವ್ಯಾಪ್ತಿಗೆ  ಬರುವ 6,944 ಕಾರ್ಯನಿರತ ಪತ್ರಕರ್ತರಿಗೆ ಪ್ರಯೋಜನವಾಗಲಿದ್ದು, ತಲಾ 2 ಲಕ್ಷ ರೂ.ಗಳ ಆರೋಗ್ಯ ವಿಮೆ  ಸಿಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT