ಮತ ಎಣಿಕೆ ಕೋಣೆಯಲ್ಲಿ ಮತಗಳ ಎಣಿಕೆ 
ದೇಶ

ದೇವರನಾಡು ಕೇರಳದಲ್ಲಿ ಈ ಬಾರಿ ವಿಜಯದ ಮಾಲೆ ಯಾರಿಗೆ? ಆರಂಭಿಕ ಎಣಿಕೆಯಲ್ಲಿ ಎಲ್ ಡಿಎಫ್ ಗೆ ಮುನ್ನಡೆ, ಯುಡಿಎಫ್ ಗೆ ಸತ್ವ ಪರೀಕ್ಷೆ  

ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಡುವೆ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರ ಹಂಚಿಕೆಯ ನಾಲ್ಕು ದಶಕಗಳ ಚಿತ್ರಣವನ್ನು ಈ ಬಾರಿ ಎಡ ಪ್ರಜಾಸತ್ತಾತ್ಮಕ ಬಣ(ಯುಡಿಎಫ್) ಮುರಿಯುತ್ತದೆಯೇ ಎಂಬ ಸಂಶಯ ಈ ಬಾರಿ ಆರಂಭಿಕ ಚುನಾವಣಾ ಫಲಿತಾಂಶದಲ್ಲಿ ಕಂಡುಬರುತ್ತಿದೆ.

ತಿರುವನಂತಪುರ: ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ನಡುವೆ ಪ್ರತಿ ಐದು ವರ್ಷಕ್ಕೊಮ್ಮೆ ಅಧಿಕಾರ ಹಂಚಿಕೆಯ ನಾಲ್ಕು ದಶಕಗಳ ಚಿತ್ರಣವನ್ನು ಈ ಬಾರಿ ಎಡ ಪ್ರಜಾಸತ್ತಾತ್ಮಕ ಬಣ(ಯುಡಿಎಫ್) ಮುರಿಯುತ್ತದೆಯೇ ಎಂಬ ಸಂಶಯ ಈ ಬಾರಿ ಆರಂಭಿಕ ಚುನಾವಣಾ ಫಲಿತಾಂಶದಲ್ಲಿ ಕಂಡುಬರುತ್ತಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಅವರ ಸಂಪುಟದ 11 ಸಚಿವರು, ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತಲ, ಹಿರಿಯ ಕಾಂಗ್ರೆಸ್ ಮುಖಂಡ ಊಮನ್ ಚಾಂಡಿ, ಮೆಟ್ರೊಮ್ಯಾನ್ ಇ ಶ್ರೀಧರನ್, ಮಾಜಿ ಕೇಂದ್ರ ಸಚಿವ ಕೆ ಜೆ ಅಲ್ಫೊನ್ಸ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಹೀಗೆ ಪ್ರಮುಖರು ಸೇರಿ 140 ಕ್ಷೇತ್ರಗಳಿಗೆ 957 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

2016ರಲ್ಲಿ ಒಂದು ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಹೆಚ್ಚಿನ ಸೀಟುಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಕೇರಳದ ಕಾಂಗ್ರೆಸ್ ಅಧ್ಯಕ್ಷ ಜೋಸ್ ಕೆ ಮಣಿ ಅವರಿಗೆ ಈ ಚುನಾವಣೆ ಮುಖ್ಯವಾಗಿದೆ. ಇವರು ದಶಕಗಳ ಕಾಲ ಯುಡಿಎಫ್ ಜೊತೆ ಹೊಂದಿದ್ದ ಮೈತ್ರಿಯನ್ನು ಮುರಿದು ಎಡ ಬಣದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ.

ಈ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಕೇರಳದಲ್ಲಿ ಬಹಳ ಸಕ್ರಿಯವಾಗಿ ಪ್ರಚಾರ ನಡೆಸಿದ್ದರು. ಹತ್ತಾರು ಸಭೆಗಳು, ರ್ಯಾಲಿಗಳು ಭಾಗಿಯಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಕೇರಳದಲ್ಲಿ ಗೆಲುವಿನ ಭರವಸೆ ಸಿಗಬಹುದೇ? 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT