ಕಮಲ್ ಹಾಸನ್ ಮತ್ತು ಅಣ್ಣಾಮಲೈ 
ದೇಶ

ತಮಿಳುನಾಡು: ನಟ ಕಮಲ್ ಹಾಸನ್ ಗೆ ಕೂದಲೆಳೆ ಅಂತರದ ಸೋಲು, 'ಕರ್ನಾಟಕ ಸಿಂಗಂ' ಅಣ್ಣಾಮಲೈಗೂ ಶಾಕ್

ತಮಿಳುನಾಡು ರಾಜಕಾರಣದಲ್ಲಿ ಹೊಸ ಬದಲಾವಣೆ ತರುವ ವಿಶ್ವಾಸ ಮೂಡಿಸಿದ್ದ ನಟ ಕಮಲ್ ಹಾಸನ್ ತಮ್ಮ ಮೊದಲ ಪ್ರಯತ್ನದಲ್ಲಿ ವಿಫಲವಾಗಿದ್ದು, ಕೂದಲೆಳೆ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಸೋಲು ಕಂಡಿದ್ದಾರೆ.

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಹೊಸ ಬದಲಾವಣೆ ತರುವ ವಿಶ್ವಾಸ ಮೂಡಿಸಿದ್ದ ನಟ ಕಮಲ್ ಹಾಸನ್ ತಮ್ಮ ಮೊದಲ ಪ್ರಯತ್ನದಲ್ಲಿ ವಿಫಲವಾಗಿದ್ದು, ಕೂದಲೆಳೆ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಸೋಲು ಕಂಡಿದ್ದಾರೆ.

ತಮಿಳುನಾಡಿನ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು, ನಟ ಕಮಲ್ ಹಾಸನ್ ಅವರು ಬಿಜೆಪಿಯ ಅಭ್ಯರ್ಥಿ ವನತಿ ಶ್ರೀನಿವಾಸನ್ ವಿರುದ್ಧ ಕೇವಲ 1500ಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ. ಆರಂಭದಲ್ಲಿ 2000 ಮತಗಳ ಅಂತರದ ಮುನ್ನಡೆ ಸಾಧಿಸಿದ್ದ ಕಮಲ್  ಹಾಸನ್ ಬಳಿಕ ತೀವ್ರ ಜಿದ್ದಾಜಿದ್ದಿನಿಂದಾಗಿ ಹಿನ್ನಡೆ ಅನುಭವಿಸಿದರು. 

ಇನ್ನು ಕೊಯಮತ್ತೂರು ದಕ್ಷಿಣ ಕ್ಷೇತ್ರವನ್ನು 2008 ರಲ್ಲಿ ವಿಧಾನಸಭಾ ಕ್ಷೇತ್ರವಾಗಿ ರಚಿಸಲಾಗಿತ್ತು. ಈ ಕ್ಷೇತ್ರವು ಎಐಎಡಿಎಂಕೆ ಪಕ್ಷದ ಆರ್ ದೊರೈಸಾಮಿ ಅವರ ಸ್ವಕ್ಷೇತ್ರವಾಗಿದ್ದು, 2011 ರಲ್ಲಿ ದೊರೈಸ್ವಾಮಿ ಅವರು ಇದೇ ಕ್ಷೇತ್ರದಿಂದ ಮೊದಲು ಶಾಸಕರಾಗಿ ಆಯ್ಕೆಯಾಗಿದ್ದರು. 2016 ರಲ್ಲಿ ಎಐಎಡಿಎಂಕೆ ಅಮ್ಮನ್  ಕೆ ಅರ್ಜುನನ್ ಅವರು ಈ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 

ಕರ್ನಾಟಕ ಸಿಂಗಂ ಅಣ್ಣಾಮಲೈಗೂ ಶಾಕ್
ಇನ್ನು ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕರ್ನಾಟಕ ಸಿಂಗಂ ಖ್ಯಾತಿಯ ಅಣ್ಣಾಮಲೈ ಅವರು ಹಾಲಿ ಚುನಾವಣೆಯಲ್ಲಿ ಸೋಲಿನ ಶಾಕ್ ಗೆ ತುತ್ತಾಗಿದ್ದಾರೆ. ತಮಿಳುನಾಡಿನ ಅರವಕುರುಚ್ಚಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದ ಅಣ್ಣಾಮಲೈ ಅವರು ನಿರಾಸೆ ಅನುಭವಿಸಿದ್ದಾರೆ. ಇಲ್ಲಿ  ಡಿಎಂಕೆಯ ಎಲಾ ಇಳಂಗೊ ಜಯಗಳಿಸಿದ್ದು, ಅವರು 34832 ಮತಗಳನ್ನು ಪಡೆದರೆ ಅಣ್ಣಾಮಲೈ 29596 ಮತ ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ; ಶಾಸಕರಿಗೆ ಡಿಸಿಎಂ ಗಾಳ?: ಪರಪ್ಪನ ಅಗ್ರಹಾರಕ್ಕೆ ಡಿಕೆ ಶಿವಕುಮಾರ್ ಭೇಟಿ!

ATM Robbery: 'ನಾನೇ ಬರ್ಬೇಕು ಅಂದ್ಕೊಡಿದ್ದೆ.. ನೀವೇ ಬಂದ್ರಿ..': ಪೊಲೀಸರ ಬಳಿ ಕಿಂಗ್ ಪಿನ್ ರವಿ ಪತ್ನಿ ಸ್ಫೋಟಕ ಹೇಳಿಕೆ, ರಿಕವರಿ ಹಣ ಏನಾಯ್ತು?

ಪ್ರವಾಸಿಗರ 'ಬೇಜವಾಬ್ದಾರಿ'ಗೆ ಚೀನಾದ ಪ್ರಸಿದ್ಧ ಪರ್ವತ ತುದಿಯ ದೇವಾಲಯ ಸುಟ್ಟು ಕರಕಲು!

nehruarchive: ನೆಹರು ಬರಹಗಳು ಕೇವಲ ಇತಿಹಾಸವಲ್ಲ, ಅವು ವಿಕಸನ ಭಾರತದ ಆತ್ಮಸಾಕ್ಷಿಯ ದಾಖಲೆಗಳು!

SCROLL FOR NEXT