ತಮಿಳು ನಾಡಿನ ರಾಜಕೀಯ ನಾಯಕರು 
ದೇಶ

ತಮಿಳು ನಾಡು ಮುಂದಿನ ಐದು ವರ್ಷ ಯಾರ ಮುಡಿಗೆ? ಸ್ಟಾಲಿನ್-ಪಳನಿಸ್ವಾಮಿ ಭವಿಷ್ಯ ಇಂದು ನಿರ್ಧಾರ 

ತಮಿಳು ನಾಡು ಚುನಾವಣಾ ರಾಜಕೀಯ ಇತಿಹಾಸದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬಹುದು. ಇಂದು ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಇದು ರಾಜ್ಯದ ಮುಂದಿನ 5 ವರ್ಷಗಳ ಆಡಳಿತಕ್ಕೆ ದಿಕ್ಸೂಚಿಯಾಗುವುದು ಮಾತ್ರವಲ್ಲದೆ ದಶಕಗಳವರೆಗೆ ತಮಿಳು ನಾಡಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಹೇಳಬಹುದು.

ಚೆನ್ನೈ: ತಮಿಳು ನಾಡು ಚುನಾವಣಾ ರಾಜಕೀಯ ಇತಿಹಾಸದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬಹುದು. ಇಂದು ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಇದು ರಾಜ್ಯದ ಮುಂದಿನ 5 ವರ್ಷಗಳ ಆಡಳಿತಕ್ಕೆ ದಿಕ್ಸೂಚಿಯಾಗುವುದು ಮಾತ್ರವಲ್ಲದೆ ದಶಕಗಳವರೆಗೆ ತಮಿಳು ನಾಡಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಹೇಳಬಹುದು.

ಈ ಬಾರಿ ರಾಜ್ಯದ ಇಬ್ಬರು ಅನಭಿಷಿಕ್ತ ರಾಜಕೀಯ ನಾಯಕರಾದ ಎರಡು ಬಲಾಢ್ಯ ಸ್ಥಳೀಯ ಪಕ್ಷಗಳನ್ನು ಕಟ್ಟಿ ಬೆಳೆಸಿದ ಎಂ ಕರುಣಾನಿಧಿ ಮತ್ತು ಜೆ ಜಯಲಲಿತಾ ಇಬ್ಬರೂ ಇಲ್ಲ. ಜನತೆ ಈ ಬಾರಿ ಇಬ್ಬರು ಖ್ಯಾತ ನಾಯಕರಾದ ಎಂ ಕೆ ಸ್ಟಾಲಿನ್ ಮತ್ತು ಎಡಪ್ಪಡಿ ಕೆ ಪಳನಿಸ್ವಾಮಿ ಅವರ ಮಧ್ಯೆ ಆಯ್ಕೆ ಮಾಡಬೇಕು. ಇವರಿಗೆ ಸ್ವಲ್ಪ ಮಟ್ಟಿಗೆ ಸ್ಪರ್ಧೆಯೊಡ್ಡಲು ನಟ ಕಮಲ್ ಹಾಸನ್, ಟಿಟಿವಿ ದಿನಕರನ್ ಮತ್ತು ಸೀಮನ್ ಬಂದಿದ್ದರು.

ಎಂ ಕೆ ಸ್ಟಾಲಿನ್ ಮತ್ತು ಕೆ. ಪಳನಿಸ್ವಾನಿ ಇಬ್ಬರಿಗೂ ತಮ್ಮ ರಾಜಕೀಯ ಭವಿಷ್ಯವನ್ನು ಸ್ಪಷ್ಟವಾಗಿ ನಿರ್ಧರಿಸುವ ಸಮಯ. ಕಳೆದ 10 ವರ್ಷಗಳಿಂದ ಸ್ಟಾಲಿನ್ ಪಕ್ಷ ಅಧಿಕಾರದಲ್ಲಿ ಇರಲಿಲ್ಲ. ಅವರಿಗೆ ಈಗ ಉಳಿವಿನ ಪ್ರಶ್ನೆ. ಇನ್ನು ಪಳನಿಸ್ವಾಮಿಯವರಿಗೆ ತಮ್ಮ ಪಕ್ಷವನ್ನು ರಾಜ್ಯದಲ್ಲಿ ಪ್ರಭಾವದಲ್ಲಿ ಉಳಿಸಲು ಅಧಿಕಾರ ಮರಳಿ ಪಡೆಯುವುದು ಮುಖ್ಯವಾಗಿರುತ್ತದೆ.

ಇಂದು ದೇಶದ ಮಟ್ಟದಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಹೀಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಗಳು ವಿಶೇಷವಾಗಿದೆ. ಸದ್ಯಕ್ಕೆ ದೇಶಾದ್ಯಂತ ಬಿಜೆಪಿ ಪ್ರಮುಖ ಅಧಿಕಾರಯುತವಾದ ಪಕ್ಷವಾಗಿದೆ.

ಇನ್ನು ಸರ್ಕಾರದ ಮಟ್ಟದಲ್ಲಿ, ತಮಿಳು ನಾಡಿಗೆ ಇಂದು ಸುಭದ್ರ ಸರ್ಕಾರದ ಅಗತ್ಯವಿದೆ. ಅಲ್ಲಿ ಕೂಡ ಕಳೆದ ವರ್ಷದಿಂದ ಕೋವಿಡ್-19 ಸಾಂಕ್ರಾಮಿಕದಿಂದ ಸಾಕಷ್ಟು ಸಮಸ್ಯೆ, ಸಾವು-ನೋವು, ಆರ್ಥಿಕ ಕುಸಿತ ಉಂಟಾಗಿದೆ. ಪಳನಿಸ್ವಾಮಿ ಸರ್ಕಾರ ಸಾಕಷ್ಟು ಏಳು ಬೀಳುಗಳನ್ನು ಕಂಡಿತ್ತು. ಇನ್ನು ಮುಂದೆ ಅಧಿಕಾರಕ್ಕೆ ಬರುವ ಪಕ್ಷಕ್ಕೆ ಕೂಡ ಸಾಕಷ್ಟು ಸವಾಲುಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT