ತಮಿಳು ನಾಡಿನ ರಾಜಕೀಯ ನಾಯಕರು 
ದೇಶ

ತಮಿಳು ನಾಡು ಮುಂದಿನ ಐದು ವರ್ಷ ಯಾರ ಮುಡಿಗೆ? ಸ್ಟಾಲಿನ್-ಪಳನಿಸ್ವಾಮಿ ಭವಿಷ್ಯ ಇಂದು ನಿರ್ಧಾರ 

ತಮಿಳು ನಾಡು ಚುನಾವಣಾ ರಾಜಕೀಯ ಇತಿಹಾಸದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬಹುದು. ಇಂದು ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಇದು ರಾಜ್ಯದ ಮುಂದಿನ 5 ವರ್ಷಗಳ ಆಡಳಿತಕ್ಕೆ ದಿಕ್ಸೂಚಿಯಾಗುವುದು ಮಾತ್ರವಲ್ಲದೆ ದಶಕಗಳವರೆಗೆ ತಮಿಳು ನಾಡಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಹೇಳಬಹುದು.

ಚೆನ್ನೈ: ತಮಿಳು ನಾಡು ಚುನಾವಣಾ ರಾಜಕೀಯ ಇತಿಹಾಸದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬಹುದು. ಇಂದು ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಇದು ರಾಜ್ಯದ ಮುಂದಿನ 5 ವರ್ಷಗಳ ಆಡಳಿತಕ್ಕೆ ದಿಕ್ಸೂಚಿಯಾಗುವುದು ಮಾತ್ರವಲ್ಲದೆ ದಶಕಗಳವರೆಗೆ ತಮಿಳು ನಾಡಿನ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಹೇಳಬಹುದು.

ಈ ಬಾರಿ ರಾಜ್ಯದ ಇಬ್ಬರು ಅನಭಿಷಿಕ್ತ ರಾಜಕೀಯ ನಾಯಕರಾದ ಎರಡು ಬಲಾಢ್ಯ ಸ್ಥಳೀಯ ಪಕ್ಷಗಳನ್ನು ಕಟ್ಟಿ ಬೆಳೆಸಿದ ಎಂ ಕರುಣಾನಿಧಿ ಮತ್ತು ಜೆ ಜಯಲಲಿತಾ ಇಬ್ಬರೂ ಇಲ್ಲ. ಜನತೆ ಈ ಬಾರಿ ಇಬ್ಬರು ಖ್ಯಾತ ನಾಯಕರಾದ ಎಂ ಕೆ ಸ್ಟಾಲಿನ್ ಮತ್ತು ಎಡಪ್ಪಡಿ ಕೆ ಪಳನಿಸ್ವಾಮಿ ಅವರ ಮಧ್ಯೆ ಆಯ್ಕೆ ಮಾಡಬೇಕು. ಇವರಿಗೆ ಸ್ವಲ್ಪ ಮಟ್ಟಿಗೆ ಸ್ಪರ್ಧೆಯೊಡ್ಡಲು ನಟ ಕಮಲ್ ಹಾಸನ್, ಟಿಟಿವಿ ದಿನಕರನ್ ಮತ್ತು ಸೀಮನ್ ಬಂದಿದ್ದರು.

ಎಂ ಕೆ ಸ್ಟಾಲಿನ್ ಮತ್ತು ಕೆ. ಪಳನಿಸ್ವಾನಿ ಇಬ್ಬರಿಗೂ ತಮ್ಮ ರಾಜಕೀಯ ಭವಿಷ್ಯವನ್ನು ಸ್ಪಷ್ಟವಾಗಿ ನಿರ್ಧರಿಸುವ ಸಮಯ. ಕಳೆದ 10 ವರ್ಷಗಳಿಂದ ಸ್ಟಾಲಿನ್ ಪಕ್ಷ ಅಧಿಕಾರದಲ್ಲಿ ಇರಲಿಲ್ಲ. ಅವರಿಗೆ ಈಗ ಉಳಿವಿನ ಪ್ರಶ್ನೆ. ಇನ್ನು ಪಳನಿಸ್ವಾಮಿಯವರಿಗೆ ತಮ್ಮ ಪಕ್ಷವನ್ನು ರಾಜ್ಯದಲ್ಲಿ ಪ್ರಭಾವದಲ್ಲಿ ಉಳಿಸಲು ಅಧಿಕಾರ ಮರಳಿ ಪಡೆಯುವುದು ಮುಖ್ಯವಾಗಿರುತ್ತದೆ.

ಇಂದು ದೇಶದ ಮಟ್ಟದಲ್ಲಿ ರಾಜಕೀಯ ಚಿತ್ರಣ ಬದಲಾಗಿದೆ. ಹೀಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಗಳು ವಿಶೇಷವಾಗಿದೆ. ಸದ್ಯಕ್ಕೆ ದೇಶಾದ್ಯಂತ ಬಿಜೆಪಿ ಪ್ರಮುಖ ಅಧಿಕಾರಯುತವಾದ ಪಕ್ಷವಾಗಿದೆ.

ಇನ್ನು ಸರ್ಕಾರದ ಮಟ್ಟದಲ್ಲಿ, ತಮಿಳು ನಾಡಿಗೆ ಇಂದು ಸುಭದ್ರ ಸರ್ಕಾರದ ಅಗತ್ಯವಿದೆ. ಅಲ್ಲಿ ಕೂಡ ಕಳೆದ ವರ್ಷದಿಂದ ಕೋವಿಡ್-19 ಸಾಂಕ್ರಾಮಿಕದಿಂದ ಸಾಕಷ್ಟು ಸಮಸ್ಯೆ, ಸಾವು-ನೋವು, ಆರ್ಥಿಕ ಕುಸಿತ ಉಂಟಾಗಿದೆ. ಪಳನಿಸ್ವಾಮಿ ಸರ್ಕಾರ ಸಾಕಷ್ಟು ಏಳು ಬೀಳುಗಳನ್ನು ಕಂಡಿತ್ತು. ಇನ್ನು ಮುಂದೆ ಅಧಿಕಾರಕ್ಕೆ ಬರುವ ಪಕ್ಷಕ್ಕೆ ಕೂಡ ಸಾಕಷ್ಟು ಸವಾಲುಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT