ಮಮತಾ ಬ್ಯಾನರ್ಜಿ 
ದೇಶ

ಜನರ ತೀರ್ಪಿಗೆ ತಲೆಬಾಗುತ್ತೇವೆ.. ಆದರೆ ಮರು ಮತಎಣಿಕೆ ಕುರಿತು ಕೋರ್ಟ್ ಗೆ ಅರ್ಜಿ: ಟಿಎಂಸಿ

ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ.. ಆದರೆ ನಂದಿಗ್ರಾಮ ಚುನಾವಣಾ ಫಲಿತಾಂಶದ ಕುರಿತು ಮರು ಮತಎಣಿಕೆಗೆ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ಕೋಲ್ಕತಾ: ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ.. ಆದರೆ ನಂದಿಗ್ರಾಮ ಚುನಾವಣಾ ಫಲಿತಾಂಶದ ಕುರಿತು ಮರು ಮತಎಣಿಕೆಗೆ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಟಿಎಂಸಿ, ನಂದಿಂಗ್ರಾಮ ಚುನಾವಣಾ ಫಲಿತಾಂಶ ಗೊಂದಲದಿಂದ ಕೂಡಿದ್ದು, ಕಾಣದ ಕೈಗಳ ಮೇಲಾಟ ಎದ್ದು ಕಾಣುತ್ತಿದೆ. ಇನ್ನೂ ಮತಎಣಿಕೆ ಕಾರ್ಯವೇ ಮುಕ್ತಾಯವಾಗಿಲ್ಲ. ನಂದಿಗ್ರಾಮದಲ್ಲಿ ಇನ್ನು ಕೆಲವು ಮತಗಳ ಎಣಿಕೆ ಬಾಕಿ ಇದೆ. ಮತ ಎಣಿಕೆ ಪೂರ್ಣವಾದ ಬಳಿಕ  ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣೆ ಆಯೋಗ ತಿಳಿಸಿದೆ. ಅದಾಗ್ಯೂ ಫಲಿತಾಂಶ ಘೋಷಣೆಯಾಗಿದೆ. ಹೀಗಾಗಿ ಮರುಮತಎಣಿಕೆ ಮಾಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಟಿಎಂಸಿ ಹೇಳಿದೆ.

ಇದೇ ವಿಚಾರವಾಗಿ ಸ್ವತಃ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕೂಡ ಮಾತನಾಡಿದ್ದು, 'ನಾನು ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಫಲಿತಾಂಶ ಘೋಷಣೆಯ ನಂತರ ಕೆಲವು ಕಾಣದ ಕೈಗಳ ಕೈವಾಡ ನಡೆದಿವೆ. ನಾನು ಅದೇನು ಎಂದು ಶೀಘ್ರ ಬಹಿರಂಗಪಡಿಸುತ್ತೇನೆ. ಈ ಸಂಬಂಧ ಮರು ಮತಎಣಿಕೆ  ಕೋರಿ ನ್ಯಾಯಾಲಯದಲ್ಲಿ  ಅರ್ಜಿ ಹಾಕುತ್ತೇವೆ ಎಂದು ಹೇಳಿದ್ದಾರೆ.

ಕೋಲ್ಕತಾದ ಕಾಳಿಘಾಟ್ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ ಆಯೋಗದ ಗೊಂದಲದ ಫಲಿತಾಂಶ ಪ್ರಕಟಣೆ ಕುರಿತು ಆಕ್ರೋಶ ವ್ಯಕ್ತಪಡಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT