ಪ್ರಧಾನಿ ನರೇಂದ್ರ ಮೋದಿ -ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳ ಯಾರ ವಶ: ಜನರ ಒಲವು ಯಾರತ್ತ-ಮೋದಿಯೋ-ದೀದಿಯೋ? 

'ಅಸಲಿ ಪರಿವರ್ತನೆ' ಘೋಷಣೆಯೊಂದಿಗೆ ಚುನಾವಣಾ ಪ್ರಚಾರಕ್ಕಿಳಿದ ಬಿಜೆಪಿಯೇ ಅಥವಾ ಮತ್ತೆ ದೀದಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆಯೇ?

ಕೋಲ್ಕತ್ತಾ: 'ಅಸಲಿ ಪರಿವರ್ತನೆ' ಘೋಷಣೆಯೊಂದಿಗೆ ಚುನಾವಣಾ ಪ್ರಚಾರಕ್ಕಿಳಿದ ಬಿಜೆಪಿಯೇ ಅಥವಾ ಮತ್ತೆ ದೀದಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆಯೇ?

ಪಶ್ಚಿಮ ಬಂಗಾಳದಲ್ಲಿ ಈ ಬಾರಿ 8 ಸುತ್ತುಗಳಲ್ಲಿ ಸುದೀರ್ಘವಾಗಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕೊರೋನಾ ಸಾಂಕ್ರಾಮಿಕ ನಡುವೆ ನಡೆದ ಬಹಳ ಕಠಿಣ ಚುನಾವಣಾ ಸ್ಪರ್ಧೆ ಎನ್ನಬಹುದು.

ಪರಸ್ಪರ ದೋಷಾರೋಪ, ಒಳ-ಹೊರಗೆ ಚರ್ಚೆಗಳು, ರಾಜಕೀಯ ವಾಗ್ದಾಳಿಗಳು ಚುನಾವಣಾ ಪ್ರಚಾರ ವೇಳೆ ಸಾಕಷ್ಟು ಕಂಡುಬಂದವು. ಚುನಾವಣಾ ಪ್ರಚಾರದಿಂದಲೇ ಪಶ್ಚಿಮ ಬಂಗಾಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾದವು ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ಮೊನ್ನೆ ಏಪ್ರಿಲ್ 29ರಂದು ಹೊರಬಂದ ಚುನಾವಣೋತ್ತರ ಸಮೀಕ್ಷೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪ್ರಬಲ ಪೈಪೋಟಿಯಿದೆ ಎಂದು ಕಂಡುಬಂದಿದೆ.

ಬಿಜೆಪಿಯ ಅಬ್ಬರದ ಪ್ರಚಾರ ಮಮತಾ ಬ್ಯಾನರ್ಜಿಯವರ ಆಡಳಿತಕ್ಕೆ ಇತಿಶ್ರೀ ಹಾಡುತ್ತದೆಯೇ ಹಾಗಾದರೆ ಅವರು ಸ್ಪರ್ಧಿಸಿರುವ ನಂದಿಗ್ರಾಮ್ ಕ್ಷೇತ್ರದ ಪರಿಸ್ಥಿತಿಯೇನು, ಮಮತಾ ಅವರ ರಾಜಕೀಯ ಭವಿಷ್ಯವೇನು? ಇಂದು ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಭದ್ರತೆ ಮಾಡಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT