ಲವ್ ಅಗರ್ವಾಲ್ 
ದೇಶ

12 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳು; ಕೆಲ ರಾಜ್ಯಗಳಲ್ಲಿ ಇಳಿ ಮುಖವಾಗುತ್ತಿದೆ ಸೋಂಕು: ಕೇಂದ್ರ ಆರೋಗ್ಯ ಇಲಾಖೆ

ದೆಹಲಿ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಕೆಲ ರಾಜ್ಯಗಳಲ್ಲಿ ಸೋಂಕು ಇಳಿಮುಖವಾಗುತ್ತಿರುವ ಚಿಹ್ನೆ ತೋರುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ದೆಹಲಿ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಕೆಲ ರಾಜ್ಯಗಳಲ್ಲಿ ಸೋಂಕು ಇಳಿಮುಖವಾಗುತ್ತಿರುವ ಚಿಹ್ನೆ ತೋರುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತು ಹೇಳಿಕೆ ನೀಡಿರುವ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು, ದೇಶಾದ್ಯಂತ ಇದುವರೆಗೆ ಶೇ.81.77 ರಷ್ಟು ಜನರು ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಸುಮಾರು 34 ಲಕ್ಷ ಸಕ್ರೀಯ ಪ್ರಕರಣಗಳಿವೆ. ಸುಮಾರು 2 ಲಕ್ಷದವರೆಗೆ ಜನರು ಈ ಮಾರಕ ಸೋಂಕಿಗೆ ಪ್ರಾಣ  ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಸುಮಾರು 3417 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ದೇಶದ ಒಟ್ಟು 12 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗುತ್ತಿದ್ದರೆ, 7 ರಾಜ್ಯಗಳಲ್ಲಿ 50 ಸಾವಿರದಿಂದ 1 ಲಕ್ಷದವರೆಗೆ ಸಕ್ರಿಯ ಪ್ರಕರಣಗಗಳಿವೆ ಹಾಗೂ 17 ರಾಷ್ಯಗಳಲಿ  50 ಸಾವಿರಕ್ಕಿಂತಲೂ ಕಡಿಮೆ ಸಕ್ರೀಯ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.
 
ಈ ಮಧ್ಯೆ ದೆಹಲಿ, ಮಧ್ಯಪ್ರದೇಶ, ಛತ್ತೀಸ್‌ಗಡ, ಮಹಾರಾಷ್ಟ್ರ ಮತ್ತು ಪಂಜಾಬ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದೈನಂದಿನ ಹೊಸ ಪ್ರಕರಣಗಳ ಕುಸಿತದ ಆರಂಭಿಕ ಲಕ್ಷಣಗಳನ್ನು ತೋರಿಸುತ್ತಿವೆ. ಆದರೆ ಇವು ಯಾವುದನ್ನೂ ವಿಶ್ಲೇಷಿಸಲು ಬಹಳ ಮುಂಚಿನ ಸಂಕೇತಗಳಾಗಿವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ  ಸ್ಪಷ್ಟ ಚಿತ್ರಣ ದೊರೆಯಲಿದೆ. ಆದಾಗ್ಯೂ, ಇತರ ಕೆಲವು ರಾಜ್ಯಗಳು ಕೋವಿಡ್ ಪ್ರಕರಣಗಳಲ್ಲಿ ಹೆಚ್ಚುತ್ತಿರುವ ಪ್ರವೃತ್ತಿಯನ್ನು ತೋರಿಸುತ್ತಿವೆ. ಹೀಗಾಗಿ ಈ ರಾಜ್ಯಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಲವ್ ಅಗರ್ವಾಲ್ ಹೇಳಿದ್ದಾರೆ. 

ದೈನಂದಿನ ಸೋಂಕು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಚಂಡೀಗಡ, ಹರಿಯಾಣ, ಕರ್ನಾಟಕ, ಕೇರಳ, ಹಿಮಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯ ರಾಜ್ಯಗಳಿವೆ.

ಮೇ 2 ರಂದು ಚೇತರಿಕೆ ಪ್ರಮಾಣವು ಶೇಕಡಾ 78 ರಷ್ಟಿದ್ದು, ಇದು ಮೇ 3 ರಂದು ಸುಮಾರು 82 ಪ್ರತಿಶತದಷ್ಟು ಏರಿದೆ ಎಂದು ಅವರು ಹೇಳಿದರು. ಇವುಗಳು ಆರಂಭಿಕ ಸಕಾರಾತ್ಮಕ ಬೆಳವಣಿಗೆಯಾಗಿದ್ದು, ಸರಕಾರವು ನಿಯಮಿತವಾಗಿ ಕೆಲಸ ಮಾಡಬೇಕಾಗಿದೆ ಎಂದು  ಅಗರ್ವಾಲ್ ಗಮನಸೆಳೆದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT