ಆಧಾರ್ ಪೂನಾವಾಲ 
ದೇಶ

11 ಕೋಟಿ ಕೋವಿಶೀಲ್ಡ್ ಲಸಿಕೆಗಾಗಿ ಕೇಂದ್ರದಿಂದ 1,732 ಕೋಟಿ ರೂ. ನಮಗೆ ತಲುಪಿದೆ: ಸೀರಮ್ ಕಂಪನಿ

ಮೇ, ಜೂನ್ ಮತ್ತು ಜುಲೈನಲ್ಲಿ ಕೋವಿಶೀಲ್ಡ್ ಲಸಿಕೆಯ 11 ಕೋಟಿ ಡೋಸ್‌ಗಳಿಗೆ ಏಪ್ರಿಲ್ 28ರಂದು ಕಂಪನಿಗೆ 1,732.50 ಕೋಟಿ ರೂಪಾಯಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂಬ ಸರ್ಕಾರದ ಹೇಳಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಸೋಮವಾರ ಅನುಮೋದಿಸಿದೆ.

ನವದೆಹಲಿ: ಮೇ, ಜೂನ್ ಮತ್ತು ಜುಲೈನಲ್ಲಿ ಕೋವಿಶೀಲ್ಡ್ ಲಸಿಕೆಯ 11 ಕೋಟಿ ಡೋಸ್‌ಗಳಿಗೆ ಏಪ್ರಿಲ್ 28ರಂದು ಕಂಪನಿಗೆ 1,732.50 ಕೋಟಿ ರೂಪಾಯಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂಬ ಸರ್ಕಾರದ ಹೇಳಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಸೋಮವಾರ ಅನುಮೋದಿಸಿದೆ.

"ನಾವು ಈ ಹೇಳಿಕೆಯನ್ನು ಮತ್ತು ಮಾಹಿತಿಯ ಸತ್ಯಾಸತ್ಯತೆಯನ್ನು ಅನುಮೋದಿಸುತ್ತೇವೆ. ನಾವು ಕಳೆದ ಒಂದು ವರ್ಷದಿಂದ ಭಾರತ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಅದರ ಬೆಂಬಲಕ್ಕೆ ಧನ್ಯವಾದಗಳು. ನಾವು ಸಾಧ್ಯವಾದಷ್ಟು ಪ್ರತಿ ಜೀವವನ್ನು ಉಳಿಸಲು ನಮ್ಮ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಬದ್ಧರಾಗಿದ್ದೇವೆ" ಎಂದು ಎಸ್‌ಐಐ ಟ್ವಿಟರ್‌ನಲ್ಲಿ ಹೇಳಿದೆ.

ಎಸ್‌ಐಐನೊಂದಿಗೆ ಕೋವಿಶೀಲ್ಡ್ ಲಸಿಕೆಗಾಗಿ ಯಾವುದೇ ಹೊಸ ಆದೇಶಗಳನ್ನು ನೀಡಿಲ್ಲ ಎಂಬ ಮಾಧ್ಯಮಗಳ ಆರೋಪವನ್ನು ಆರೋಗ್ಯ ಸಚಿವಾಲಯ ನಿರಾಕರಿಸಿದ ಬೆನ್ನಲ್ಲೇ ಕಂಪನಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೇ, ಜೂನ್ ಮತ್ತು ಜುಲೈ ಮೂರು ತಿಂಗಳ ಕಾಲ 11 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಗಾಗಿ ಎಸ್‌ಐಐಗೆ 1,732.50 ಕೋಟಿ ರೂ.ಗಳ ಸಂಪೂರ್ಣ ಮುಂಗಡವನ್ನು ಪಾವತಿಸಿದೆ. ಟಿಡಿಎಸ್ ನಂತರ 1,699.50 ಕೋಟಿ ರೂ.ಗಳಷ್ಟಿದ್ದ ಮೊತ್ತವನ್ನು ಎಸ್‌ಐಐ ಏಪ್ರಿಲ್ 28 ರಂದು ಸ್ವೀಕರಿಸಿದೆ ಎಂದು ಸಚಿವಾಲಯ ಹೇಳಿತ್ತು.

ದಿನಾಂಕದಂತೆ, 10 ಕೋಟಿ ಡೋಸ್‌ಗಳ ಪೈಕಿ ಮೇ 3 ರವರೆಗೆ 8.744 ಕೋಟಿ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕೋವಿಡ್ ಗಾಗಿ ಕೇಂದ್ರವು ಯಾವುದೇ ಹೊಸ ಆದೇಶವನ್ನು ನೀಡಿಲ್ಲ ಎಂದು ಆರೋಪಿಸಿರುವ ಮಾಧ್ಯಮ ವರದಿಗಳು ತಪ್ಪು ಮತ್ತು ಸತ್ಯಕ್ಕೆ ದೂರವಾದವು ಎಂದು ಕೇಂದ್ರ ಹೇಳಿತ್ತು.

ಮೇ 2ರವರೆಗೂ, ಕೇಂದ್ರವು 16.54 ಕೋಟಿ ಲಸಿಕೆ ಪ್ರಮಾಣವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. ಇದೇ ವೇಳೆ ಇನ್ನೂ 78 ಲಕ್ಷಕ್ಕೂ ಹೆಚ್ಚು ಡೋಸ್ ಗಳು ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ 56 ಲಕ್ಷಕ್ಕೂ ಹೆಚ್ಚಿನ ಡೋಸ್ ಗಳನ್ನು ರಾಜ್ಯಗಳು ಮತ್ತು ಯುಟಿಗಳು ನೀಡಲಾಗುವುದು ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT