ಆಧಾರ್ ಪೂನಾವಾಲ 
ದೇಶ

11 ಕೋಟಿ ಕೋವಿಶೀಲ್ಡ್ ಲಸಿಕೆಗಾಗಿ ಕೇಂದ್ರದಿಂದ 1,732 ಕೋಟಿ ರೂ. ನಮಗೆ ತಲುಪಿದೆ: ಸೀರಮ್ ಕಂಪನಿ

ಮೇ, ಜೂನ್ ಮತ್ತು ಜುಲೈನಲ್ಲಿ ಕೋವಿಶೀಲ್ಡ್ ಲಸಿಕೆಯ 11 ಕೋಟಿ ಡೋಸ್‌ಗಳಿಗೆ ಏಪ್ರಿಲ್ 28ರಂದು ಕಂಪನಿಗೆ 1,732.50 ಕೋಟಿ ರೂಪಾಯಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂಬ ಸರ್ಕಾರದ ಹೇಳಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಸೋಮವಾರ ಅನುಮೋದಿಸಿದೆ.

ನವದೆಹಲಿ: ಮೇ, ಜೂನ್ ಮತ್ತು ಜುಲೈನಲ್ಲಿ ಕೋವಿಶೀಲ್ಡ್ ಲಸಿಕೆಯ 11 ಕೋಟಿ ಡೋಸ್‌ಗಳಿಗೆ ಏಪ್ರಿಲ್ 28ರಂದು ಕಂಪನಿಗೆ 1,732.50 ಕೋಟಿ ರೂಪಾಯಿಯನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂಬ ಸರ್ಕಾರದ ಹೇಳಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಸೋಮವಾರ ಅನುಮೋದಿಸಿದೆ.

"ನಾವು ಈ ಹೇಳಿಕೆಯನ್ನು ಮತ್ತು ಮಾಹಿತಿಯ ಸತ್ಯಾಸತ್ಯತೆಯನ್ನು ಅನುಮೋದಿಸುತ್ತೇವೆ. ನಾವು ಕಳೆದ ಒಂದು ವರ್ಷದಿಂದ ಭಾರತ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ಅದರ ಬೆಂಬಲಕ್ಕೆ ಧನ್ಯವಾದಗಳು. ನಾವು ಸಾಧ್ಯವಾದಷ್ಟು ಪ್ರತಿ ಜೀವವನ್ನು ಉಳಿಸಲು ನಮ್ಮ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಬದ್ಧರಾಗಿದ್ದೇವೆ" ಎಂದು ಎಸ್‌ಐಐ ಟ್ವಿಟರ್‌ನಲ್ಲಿ ಹೇಳಿದೆ.

ಎಸ್‌ಐಐನೊಂದಿಗೆ ಕೋವಿಶೀಲ್ಡ್ ಲಸಿಕೆಗಾಗಿ ಯಾವುದೇ ಹೊಸ ಆದೇಶಗಳನ್ನು ನೀಡಿಲ್ಲ ಎಂಬ ಮಾಧ್ಯಮಗಳ ಆರೋಪವನ್ನು ಆರೋಗ್ಯ ಸಚಿವಾಲಯ ನಿರಾಕರಿಸಿದ ಬೆನ್ನಲ್ಲೇ ಕಂಪನಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮೇ, ಜೂನ್ ಮತ್ತು ಜುಲೈ ಮೂರು ತಿಂಗಳ ಕಾಲ 11 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆಗಾಗಿ ಎಸ್‌ಐಐಗೆ 1,732.50 ಕೋಟಿ ರೂ.ಗಳ ಸಂಪೂರ್ಣ ಮುಂಗಡವನ್ನು ಪಾವತಿಸಿದೆ. ಟಿಡಿಎಸ್ ನಂತರ 1,699.50 ಕೋಟಿ ರೂ.ಗಳಷ್ಟಿದ್ದ ಮೊತ್ತವನ್ನು ಎಸ್‌ಐಐ ಏಪ್ರಿಲ್ 28 ರಂದು ಸ್ವೀಕರಿಸಿದೆ ಎಂದು ಸಚಿವಾಲಯ ಹೇಳಿತ್ತು.

ದಿನಾಂಕದಂತೆ, 10 ಕೋಟಿ ಡೋಸ್‌ಗಳ ಪೈಕಿ ಮೇ 3 ರವರೆಗೆ 8.744 ಕೋಟಿ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕೋವಿಡ್ ಗಾಗಿ ಕೇಂದ್ರವು ಯಾವುದೇ ಹೊಸ ಆದೇಶವನ್ನು ನೀಡಿಲ್ಲ ಎಂದು ಆರೋಪಿಸಿರುವ ಮಾಧ್ಯಮ ವರದಿಗಳು ತಪ್ಪು ಮತ್ತು ಸತ್ಯಕ್ಕೆ ದೂರವಾದವು ಎಂದು ಕೇಂದ್ರ ಹೇಳಿತ್ತು.

ಮೇ 2ರವರೆಗೂ, ಕೇಂದ್ರವು 16.54 ಕೋಟಿ ಲಸಿಕೆ ಪ್ರಮಾಣವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. ಇದೇ ವೇಳೆ ಇನ್ನೂ 78 ಲಕ್ಷಕ್ಕೂ ಹೆಚ್ಚು ಡೋಸ್ ಗಳು ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ 56 ಲಕ್ಷಕ್ಕೂ ಹೆಚ್ಚಿನ ಡೋಸ್ ಗಳನ್ನು ರಾಜ್ಯಗಳು ಮತ್ತು ಯುಟಿಗಳು ನೀಡಲಾಗುವುದು ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ಊರಸವಳ್ಳಿಯಂತೆ ಬದಲಾಗ್ತಾರೇ: ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಲೇ ಭಾಷಣ: ನೆಟ್ಟಿಗರು ಗರಂ, Video!

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..