ಬಿಜೆಪಿ 
ದೇಶ

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ 'ದುರಹಂಕಾರ'ವೂ ಕಾರಣ: ಶಿವಸೇನೆ

ಇತ್ತೀಚಿಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿಗೆ ಬಿಜೆಪಿಯ ದುರಹಂಕಾರವೂ ಒಂದು ಕಾರಣ ಎಂದು ಶಿವಸೇನೆ ಮಂಗಳವಾರ ಹೇಳಿದೆ.

ಮುಂಬೈ: ಇತ್ತೀಚಿಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿಗೆ ಬಿಜೆಪಿಯ ದುರಹಂಕಾರವೂ ಒಂದು ಕಾರಣ ಎಂದು ಶಿವಸೇನೆ ಮಂಗಳವಾರ ಹೇಳಿದೆ.

ಸೇನಾ ಮುಖವಾಣಿ 'ಸಾಮ್ನಾ' ಸಂಪಾದಕೀಯವು ಮಹಾರಾಷ್ಟ್ರದಲ್ಲಿ ಅಧಿಕಾರದಿಂದ ಹೊರಗುಳಿಯಲು ಬಿಜೆಪಿಯ "ಅಸಹಿಷ್ಣುತೆ" ಕಾರಣವಾಗಿದೆ ಎಂದು ಹೇಳಿದೆ.

ಕೇಸರಿ ಪಕ್ಷದ ಬಗ್ಗೆ ಮಾತನಾಡುವಾಗ ಎಚ್ಚಿರಿಕೆಯಿಂದ ಮಾತನಾಡಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರಿಗೆ ಹೇಳಿದೆ ಬೆನ್ನಲ್ಲೇ ಶಿವಸೇನೆ ಈ ರೀತಿ ತಿರುಗೇಟು ನೀಡಿದೆ.

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಭುಜಬಲ್ ಅವರು ಬಿಜೆಪಿಯ ಬಗ್ಗೆ ಕೆಲವು ಹೇಳಿಕೆಗಳನ್ನು ನೀಡಿದ್ದರು, ಅಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕೇಸರಿ ಪಕ್ಷವನ್ನು ಸೋಲಿಸಿದೆ ಎಂದಿದ್ದರು.

ಭುಜಬಲ್ ಅವರು ಬ್ಯಾನರ್ಜಿಯ ಅದ್ಭುತ ವಿಜಯವನ್ನು ಶ್ಲಾಘಿಸಿದ್ದಾರೆ ಮತ್ತು ಅದರಲ್ಲಿ ತಪ್ಪೇನು ಎಂದು ಶಿವಸೇನೆ ಪ್ರಶ್ನಿಸಿದೆ. 

"ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಬಿಜೆಪಿಯ ದುರಹಂಕಾರವೂ ಒಂದು ಕಾರಣ" ಎಂದು ಮರಾಠಿ ದಿನಪತ್ರಿಕೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ; ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi

ಪಾರ್ಟಿಗೆ ತರುತ್ತಿದ್ದ ಗ್ಯಾಸ್ ಬಲೂನ್ ಲಿಫ್ಟ್ ನಲ್ಲಿ ಸ್ಫೋಟ, ಇಬ್ಬರಿಗೆ ಗಾಯ: Video Viral

News Wrap 04-02-2026 | ಅಬಕಾರಿ ಇಲಾಖೆ ಹಗರಣ: ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು; Namma Metro ಪ್ರಯಾಣ ದರ ಶೇ.5 ರಷ್ಟು ಏರಿಕೆಗೆ ನಿರ್ಧಾರ!

ಎಂಜಿನ್‌ನಲ್ಲಿ ಬೆಂಕಿ: ಟರ್ಕಿಶ್ ಏರ್‌ಲೈನ್ಸ್ ವಿಮಾನ ಕೋಲ್ಕತ್ತಾದಲ್ಲಿ ತುರ್ತು ಭೂಸ್ಪರ್ಶ; ತಪ್ಪಿದ ದೊಡ್ಡ ಅನಾಹುತ

SCROLL FOR NEXT