ಜೈಶಂಕರ್‌- ಬ್ಲಿಂಕೆನ್‌ ಭೇಟಿ 
ದೇಶ

ಜೈಶಂಕರ್‌- ಬ್ಲಿಂಕೆನ್‌ ಭೇಟಿ: ಕೋವಿಡ್‌ ಲಸಿಕೆ ಉತ್ಪಾದನೆ ಹೆಚ್ಚಳ ಕುರಿತು ಚರ್ಚೆ 

ಅಮೆರಿಕದ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರನ್ನು ಭೇಟಿಯಾದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಜಗತ್ತಿಗೇ ಮಾರಕವಾಗಿ ಪರಿಣಮಿಸಿರುವ ಕೋವಿಡ್-19 ಸಾಂಕ್ರಾಮಿಕದ ಕುರಿತು ಚರ್ಚೆ ನಡೆಸಿದ್ದಾರೆ.

ನವದೆಹಲಿ: ಅಮೆರಿಕದ ರಾಜ್ಯ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರನ್ನು ಭೇಟಿಯಾದ ವಿದೇಶಾಂಗ ಸಚಿವ ಎಸ್.ಜೈಶಂಕರ್, ಜಗತ್ತಿಗೇ ಮಾರಕವಾಗಿ ಪರಿಣಮಿಸಿರುವ ಕೋವಿಡ್-19 ಸಾಂಕ್ರಾಮಿಕದ ಕುರಿತು ಚರ್ಚೆ ನಡೆಸಿದ್ದಾರೆ.

ನಾಲ್ಕು ದಿನಗಳ ಭೇಟಿಗಾಗಿ ಬ್ರಿಟನ್‌ಗೆ ಬಂದಿರುವ ಅವರು, ಸೋಮವಾರ ಜಿ–7 ದೇಶಗಳ ವಿದೇಶಾಂಗ ಸಚಿವರ ಜತೆಗಿನ ಸಭೆಯ ನಡುವೆ, ಬ್ಲಿಂಕೆನ್ ಅವರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ಕೋವಿಡ್ ವಿರುದ್ಧದ ಭಾರತದ ಹೋರಾಟವನ್ನು ಅಮೆರಿಕ ಬೆಂಬಲಿಸಿದ್ದಕ್ಕಾಗಿ ಬ್ಲಿಂಕೆನ್‌ ಅವರಿಗೆ ಧನ್ಯವಾದ  ಅರ್ಪಿಸಿದರು. ಕೋವಿಡ್ ಸವಾಲು, ವಿಸ್ತರಿಸಿದ ಲಸಿಕೆ ಉತ್ಪಾದನಾ ಸಾಮರ್ಥ್ಯ ಮತ್ತು ವಿಶ್ವಾಸಾರ್ಹ ಪೂರೈಕೆ ಸರಪಳಿ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿದೇಶಾಂಗ ಸಚಿವಾಲಯ, "ಕೋವಿಡ್‌ ಪರಿಸ್ಥಿತಿಯನ್ನು ಎದುರಿಸಲು ಅಮೆರಿಕದದಿಂದ ದೊರೆಯುವ ಬೆಂಬಲದ ಕುರಿತು ಚರ್ಚೆ ನಡೆಸಲಾಯಿತು. ಅಂತೆಯೇ ಈ ಸಂಕಷ್ಟದ ಸಮಯದಲ್ಲಿ ಭಾರತಕ್ಕೆ ಅಮೆರಿಕ ವಿಶೇಷವಾಗಿ ನೀಡಿದ ಬೆಂಬಲ, ವಿಶೇಷವಾಗಿ  ಆಮ್ಲಜನಕ ಮತ್ತು ರೆಮ್ಡೆಸಿವಿರ್ ಪೂರೈಕೆಗಾಗಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ.

ಮಂಗಳವಾರ ನಡೆದ ಜಿ-7 ದೇಶಗಳ ವಿದೇಶಾಂಗ ಮತ್ತು ಅಭಿವೃದ್ಧಿ ಸಚಿವರ ಸಭೆಗೂ ಮುನ್ನ, ಇಂಡೊ-ಪೆಸಿಫಿಕ್ ಪ್ರದೇಶ, ಹವಾಮಾನ ಬದಲಾವಣೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮತ್ತು ಮ್ಯಾನ್ಮಾರ್‌ಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚಿಸಲಾಯಿತು ಎಂದು ಜೈಶಂಕರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

‘ಬ್ಲಿಂಕೆನ್‌ ನನ್ನ ಹಳೆಯ ಸ್ನೇಹಿತ. ಅವರನ್ನು ವೈಯಕ್ತಿಕವಾಗಿ ಭೇಟಿಯಾಗುತ್ತಿರುವುದು ಖುಷಿತಂದಿದೆ. ಈ ಭೇಟಿಯಲ್ಲಿ ಜಾಗತಿಕವಾಗಿ ಕೋವಿಡ್‌ ಸೃಷ್ಟಿಸಿರುವ ಸವಾಲಿನ ಬಗ್ಗೆ ವಿವರವಾದ ಚರ್ಚೆ ನಡೆದಿದೆ. ಲಸಿಕೆ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಸರಬರಾಜು ಕುರಿತು ಚರ್ಚಿಸಲಾಯಿತು. ಎಂದು  ಜೈಶಂಕರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಅಂತೆಯೇ ಬ್ಲಿಂಕೆನ್ ಕೂಡ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಕೈಜೋಡಿಸುವುದಾಗಿ ಘೋಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT