ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ 
ದೇಶ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ: ರಾಜ್ಯಪಾಲರಿಗೆ ಪ್ರಧಾನಿ ಕರೆ; ಆತಂಕ ವ್ಯಕ್ತ!

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉಂಟಾಗಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯಪಾಲ ಜಗದೀಪ್ ಧನ್ಕರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. 

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉಂಟಾಗಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯಪಾಲ ಜಗದೀಪ್ ಧನ್ಕರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯಪಾಲರು, "ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಪಶ್ಚಿಮ ಬಂಗಾಳದಲ್ಲಿ ಉಂಟಾಗುತ್ತಿರುವ ರಾಜಕೀಯ ಹಿಂಶಾಚಾರದ ಬಗ್ಗೆ ದುಃಖ ಹಾಗೂ ಆತಂಕ ವ್ಯಕ್ತಪಡಿಸಿದರು" ಎಂದು ಹೇಳಿದ್ದಾರೆ 

ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ. 

ಇದಕ್ಕೂ ಮುನ್ನ ಪಶ್ಚಿಮ ಬಂಗಾಳದ ರಾಜ್ಯಪಾಲರು ಪೊಲೀಸರು ಹಾಗೂ ಕೋಲ್ಕತ್ತಾ ಆಯುಕ್ತರಿಗೆ ವಿವೇಚನೆ ಇಲ್ಲದೇ ನಡೆಯುತ್ತಿರುವ, ರಾಜಕೀಯ ಹಿಂಸಾಚಾರವನ್ನು ತಡೆಯುವಂತೆ ಸೂಚನೆ ನೀಡಿದ್ದರು. ಈ ಹಿಂಸಾಚಾರವನ್ನು ಪ್ರಜಾಪ್ರಭುತ್ವ ತಲೆ ತಗ್ಗಿಸುವ, ಅವಮಾನಕಾರಿ ಕೃತ್ಯ ಎಂದು ಹೇಳಿದ್ದರು.

"ಜಾಗತಿಕ ಮಟ್ಟದಲ್ಲಿ ಬಂಗಾಳಿಗಳು ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದು, ಅರಾಜಕತೆ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ" ಎಂದು ರಾಜ್ಯಪಾಲರು ಹೇಳಿದ್ದಾರೆ. 

ಇದೇ ವೇಳೆ ಬಿಜೆಪಿ ನಾಯಕ ಸ್ವಪನ್ ದಾಸ್ ಗುಪ್ತ ಮಾತನಾಡಿದ್ದು, ಕೋಲ್ಕತ್ತ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಈ ರಾಜಕೀಯ ಹಿಂಸಾಚಾರದ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. 

ನಂದಿಗ್ರಾಮ, ಕೂಚ್ ಬೆಹಾರ್ ನ ಸಿತಾಲ್ಕುಚಿ ಗಳಲ್ಲಿ ಬಿಜೆಪಿ ಕಚೇರಿಯ ಮೇಲೆ ದಾಳಿ ನಡೆದಿದ್ದು, ಧ್ವಂಸಗೊಳಿಸಲಾಗಿದೆ. ಇನ್ನೂ ಕೆಲವೆಡೆ ಬಿಜೆಪಿ ಕಾರ್ಯಕರ್ತರು ಚುನಾವಣೆಯ ಫಲಿತಾಂಶದ ನಂತರ ರಾಜಕೀಯ ಕಾರಣಗಳಿಂದಾಗಿ ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT